ರಾಘವೇಶ್ವರ ಶ್ರೀಗೆ ಬಿಗ್ ರಿಲೀಫ್ ಕೊಟ್ಟ ಹೈಕೋರ್ಟ್: 2ನೇ ಅತ್ಯಾಚಾರ ಪ್ರಕರಣ ರದ್ದು!

0
Spread the love

ಬೆಂಗಳೂರು:- ಎರಡನೇ ಅತ್ಯಾಚಾರ ಪ್ರಕರಣದಲ್ಲೂ ರಾಘವೇಶ್ವರ ಶ್ರೀಗಳಿಗೆ ಹೈಕೋರ್ಟ್ ಬಿಗ್ ರಿಲೀಫ್ ಕೊಟ್ಟಿದ್ದು, ಕೇಸ್ ರದ್ದು ಮಾಡಿ ಇಂದು ಆದೇಶ ಹೊರಡಿಸಿದೆ.

Advertisement

ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠವು ಇಂದು ಆದೇಶ ಹೊರಡಿಸಿದ್ದು, ಆ ಮೂಲಕ ರಾಘವೇಶ್ವರ ಶ್ರೀಗಳಿಗೆ ಬಿಗ್​ ರಿಲೀಫ್ ಸಿಕ್ಕಂತಾಗಿದೆ. ಕಳೆದ ಒಂಭತ್ತು ವರ್ಷಗಳ ಹಿಂದೆ ಮಹಿಳೆಯೊಬ್ಬರು ಹೊಸನಗರ ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳ ವಿರುದ್ಧ ಪ್ರಕರಣ ದಾಖಲಿಸಿದ್ದರು. ಬಳಿಕ ಸಿಐಡಿ ಪೊಲೀಸರು ಶ್ರೀಗಳ ವಿರುದ್ಧ ಆರೋಪಪಟ್ಟಿ ದಾಖಲಿಸಿದ್ದರು. ಹೈಕೋರ್ಟ್ ವಿಚಾರಣೆ ವೇಳೆ ರಾಘವೇಶ್ವರ ಶ್ರೀಗಳ ಪರ ವಕೀಲ ಪಿ.ಎನ್.ಮನಮೋಹನ್ ವಾದ ಮಂಡಿಸಿದ್ದು, ವೈಯಕ್ತಿಕ ವೈವಾಹಿಕ ಸಮಸ್ಯೆಯಿಂದಾಗಿ ಮಹಿಳೆ ಕೇಸ್ ದಾಖಲಿಸಿದ್ದಾರೆ. ದುರುದ್ದೇಶದಿಂದ ಅತ್ಯಾಚಾರದ ದೂರು ನೀಡಿದ್ದಾರೆಂದು ವಾದಿಸಿದ್ದಾರೆ.

ವಾದ ಆಲಿಸಿದ ನ್ಯಾಯಾಧೀಶರು, ಕೊನೆಗೂ ಶ್ರೀಗಳ ವಿರುದ್ಧದ 2ನೇ ಅತ್ಯಾಚಾರ ಪ್ರಕರಣವನ್ನು ರದ್ದು ಮಾಡಿ ಆದೇಶ ಹೊರಡಿಸಿದೆ.

ಮೊದಲನೇ ಅತ್ಯಾಚಾರ ಪ್ರಕರಣದಲ್ಲೂ ರಿಲೀಫ್:

ಇದಕ್ಕೂ ಮೊದಲನೇ ಅತ್ಯಾಚಾರ ಪ್ರಕರಣದಲ್ಲಿ ರಾಘವೇಶ್ವರ ಭಾರತಿ ಸ್ವಾಮೀಜಿಗೆ ಹೈಕೋರ್ಟ್​ನಲ್ಲಿ ತಾಂತ್ರಿಕ ಕಾರಣದಿಂದ ರಿಲೀಫ್ ಸಿಕ್ಕಿತ್ತು. ಸಿಐಡಿಯನ್ನು ಪೊಲೀಸ್ ಠಾಣೆ ಎಂದು ಘೋಷಿಸಿಲ್ಲ, ಸರ್ಕಾರ ಈ ಬಗ್ಗೆ ಪ್ರತ್ಯೇಕ ಅಧಿಸೂಚನೆ ಹೊರಡಿಸಿಲ್ಲ. ಹೀಗಾಗಿ ಸಿಐಡಿ ಪೊಲೀಸರಿಗೆ ಠಾಣೆಯ ಅಧಿಕಾರವಿಲ್ಲ. ಹೀಗಾಗಿ ಸಿಐಡಿ ಪೊಲೀಸರಿಗೆ ಆರೋಪಪಟ್ಟಿ ಸಲ್ಲಿಸಲು ಅವಕಾಶವಿಲ್ಲ ಎಂಬ ಕಾರಣಕ್ಕೆ ರಾಘವೇಶ್ವರ ಶ್ರೀಗಳ ವಿರುದ್ಧದ ಪ್ರಕರಣ ರದ್ದುಗೊಳಿಸಲಾಗಿತ್ತು.


Spread the love

LEAVE A REPLY

Please enter your comment!
Please enter your name here