ಬೆಂಗಳೂರು: ಬೆಂಗಳೂರು ವಿವಿಗೆ ಮನಮೋಹನ್ ಸಿಂಗ್ ಹೆಸರಿಗೆ ಬಿಜೆಪಿ ವಿರೋಧ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೇ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಅವರು ಯಾವ್ಯಾವುದೋ ಹೆಸರು ಇಡುತ್ತಾರೆ.
ಮನಮೋಹನ್ ಸಿಂಗ್ ಹೆಸರು ಇಡಬಾರದ? ಇಂಟರ್ನ್ಯಾಷನಲ್ ಏರ್ಪೋರ್ಟ್ಗೆ ಫ್ಲೈಓವರ್ ಮಾಡಿದ್ದು ಯಾರು? ಎಲೆಕ್ಟ್ರಾನಿಕ್ ಸಿಟಿಗೆ ಫ್ಲೈಓವರ್ ಮಾಡಿದ್ದು ಯಾರು?ನೆಲಮಂಗಲ ಫ್ಲೈಓವರ್ ಮಾಡಿದ್ದು ಯಾರು? ನರೇಗಾ ತಂದಿದ್ದು ಯಾರು? ಬಿಜೆಪಿಯವರು ಏನಾದರೂ ಮಾಡಿದ್ದಾರ ಎಂದು ಪ್ರಶ್ನಿಸಿದ್ದಾರೆ.
ಬಿಜೆಪಿ ಹಲಾಲ್ ಬಜೆಟ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರು ಏನು ಬೇಕಾದರೂ ಮಾತಾಡಲಿ. ಪಾಪ ಅವರು ಇನ್ನೇನು ಮಾಡುತ್ತಾರೆ? ಇನ್ನೇನು ಹೇಳೋಕೆ ಸಾಧ್ಯ? ಸತ್ಯನಾ ಮುಚ್ಚಿಡೋಕೆ ಆಗುತ್ತಾ? ಬಿಜೆಪಿಯವರು ಬಜೆಟ್ನ ಕಣ್ಣಲ್ಲಿ ಓದಿದ್ದಾರೆ, ಕಿವಿಯಲ್ಲಿ ಕೇಳಿಸಿಕೊಡಿದ್ದಾರೆ. ಬಾಯಲ್ಲಿ ಇನ್ನೇನು ಮಾತಾಡಬಹುದು. ಬಾಯಲ್ಲಿ ಸುಳ್ಳು ಹೇಳಬಹುದು ಅಲ್ವಾ, ಹಾಗಾಗಿ ಅದನ್ನ ಮಾಡುತ್ತಿದ್ದಾರೆ ಎಂದು ತಿರುಗೇಟು ಕೊಟ್ಟರು.