HomeGadag Newsಚುನಾವಣಾಪೂರ್ವ ಭರವಸೆಗಳನ್ನು ಸರ್ಕಾರ ಮರೆತಿದೆ

ಚುನಾವಣಾಪೂರ್ವ ಭರವಸೆಗಳನ್ನು ಸರ್ಕಾರ ಮರೆತಿದೆ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಡಂಬಳ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರ ಹಿಡಿಯಲು ಐದು ಗ್ಯಾರಂಟಿ ಘೋಷಿಸಿ ಈಗ ಎಸ್.ಸಿ.ಎಸ್.ಪಿ. ಮತ್ತು ಟಿ.ಎಸ್.ಪಿ.ಗೆ ಮೀಸಲಿಟ್ಟ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡು ಎಸ್.ಸಿ-ಎಸ್.ಟಿ.ಗಳಿಗೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿ ಸೋಮವಾರ ಡಂಬಳ ಹೋಬಳಿಯ ಬಿಜೆಪಿ ಪಕ್ಷದ ಎಸ್‌ಸಿ-ಎಸ್.ಟಿ ಮೋರ್ಚಾ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಉಪತಹಸೀಲ್ದಾರ ಸಿ.ಕೆ. ಬೆಳವಟಗಿ ಅವರಿಗೆ ಮನವಿ ಸಲ್ಲಿಸಿದರು.

ಈ ಸಚಿದರ್ಭದಲ್ಲಿ ಡಂಬಳ ಹೋಬಳಿಯ ಬಿಜೆಪಿ ಪಕ್ಷದ ಅಧ್ಯಕ್ಷ ಅಂದಪ್ಪ ಹಾರೂಗೇರಿ ಮಾತನಾಡಿ, 2023 ಮತ್ತು 2024ನೇ ಸಾಲಿನಲ್ಲಿ ಒಟ್ಟು ಸುಮಾರು 25 ಸಾವಿರ ಕೋಟಿಯಷ್ಟು ಹಣವನ್ನು ಕಾಂಗ್ರೆಸ್ ಸರ್ಕಾರ ಬೇರೆ ಯೋಜನೆಗಳಿಗೆ ಬಳಸಿಕೊಂಡಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಬಲೀಕರಣ, ಶಿಕ್ಷಣ, ಉದ್ಯೋಗ ಸ್ವಾವಲಂಬನೆ ಮೂಲಕ ಪ್ರತಿ ವ್ಯಕ್ತಿ ಮತ್ತು ಕುಟುಂಬವನ್ನು ಸಶಕ್ತಗೊಳಿಸಬೇಕು. ದಲಿತ ಕೇರಿ, ಕಾಲೋನಿಗಳಿಗೆ, ಆದಿವಾಸಿ ಹಾಡಿಗಳಿಗೆ ಮೂಲ ಸೌಕರ್ಯ ಒದಗಿಸಬೇಕು. ಭೂ ಒಡೆತನ, ಭೂಮಿಗೆ ನೀರು, ಸ್ವ-ಉದ್ಯೋಗ, ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ, ವಸತಿ ಶಾಲೆ, ಹಾಸ್ಟೆಲ್ ನಿರ್ಮಾಣ ಇದಕ್ಕಾಗಿ ಬಳಸಬೇಕಾದ ಹಣ ದುರುಪಯೋಗ ಮಾಡಿಕೊಂಡಿದ್ದು, ಬೇರೆ ಉದ್ದೇಶಕ್ಕೆ ಬಳಸಿ ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಯನ್ನು ಈ ಸರ್ಕಾರ ಮರೆತಿದೆ ಎಂದು ದೂರಿದರು.

ಈ ಸಂದರ್ಭದಲ್ಲಿ ಈಶಪ್ಪ ರಂಗಪ್ಪನವರ, ಪಂಚಾಕ್ಷರಯ್ಯ ಹರ್ಲಾಪುರಮಠ, ಭೀರಪ್ಪ ಬಂಡಿ, ನಿಂಗಪ್ಪ ಮಾದರ, ಕುಬೇರಪ್ಪ ಬಂಡಿ, ರಾಜೇಶ ಅರಕಲ್ಲ, ಬಸುರಾಜ ಚನ್ನಳ್ಳಿ, ವೆಂಕನಗೌಡ ಪಾಟೀಲ್, ಚಂದ್ರು ಯಳಮಲಿ, ಶೇಖರಯ್ಯ ಗುರವಿನ, ವಿರುಪಾಕ್ಷಿ ಯಲಿಗಾರ, ಕುಮಾರಸ್ವಾಮಿ ಹೆಬ್ಬಳ್ಳಿಮಠ, ಸೋಮಶೇಖರ ಹಿರೇಮಠ, ಲಕ್ಷ್ಮಣ ಬೂದಿಹಾಳ, ಶಿವಾನಂದ ಹರಿಜನ, ಮಾರುತೇಪ್ಪ ಮ್ಯಾಗೇರಿ, ಪ್ರಭಣ್ಣ ಕರಮುಡಿ, ಪ್ರಕಾಶ ಕೋತಂಬ್ರಿ, ಶಿವಾನಂದ ಬಂಡಿ, ವಿನಾಯಕ ರಾಠೋಡ, ಶೇಖಪ್ಪ ಯಾವಗಲ್, ನಾಗರಾಜ ಮಳಲಿ, ವಿನಾಯಕ ರಾಠೋಡ, ಟಾಕ್ರಪ್ಪ ಲಮಾಣಿ, ಅಡವೆಪ್ಪ ಚೆನ್ನಪ್ಪಗೌಡ, ಈಶ್ವರಗೌಡ ಪಾಟೀಲ, ಪ್ರವೀಣ ವಡ್ಡಟ್ಟಿ, ಭರಮಪ್ಪ ನಾಗನೂರ ಮುಂತಾದವರಿದ್ದರು.

ಎಸ್.ಸಿ ಮೋರ್ಚಾ ಅಧ್ಯಕ್ಷ ಕೆ.ಡಿ. ಬಂಡಿ, ಬಿಜೆಪಿ ಪಕ್ಷದ ಹಿರಿಯ ಮುಖಂಡ ಡಿ. ಪ್ರಸಾದ ಮಾತನಾಡಿ, ಎಸ್.ಸಿ-ಎಸ್‌ಟಿ ಸಂಘಟನೆಗಳು ಕಾಂಗ್ರೆಸ್ ಪಕ್ಷಕ್ಕೆ ಮಂಡಿಯೂರಿ ಪ್ರತಿಭಟನೆ ಮಾಡದೆ ಮಲಗಿಕೊಂಡಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ರಾಜ್ಯ ಬಜೆಟ್ ಮುಸ್ಲಿಂ ಸಮುದಾಯವನ್ನು ಓಲೈಸುವ ಬಜೆಟ್ ಆಗಿದೆ. ಕೇವಲ ಒಂದು ಸಮುದಾಯದ ಓಲೈಕೆ ಮಾಡುತ್ತಿರುವುದು ಖಂಡನೀಯ ಎಂದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!