HomeGadag Newsಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗಳು ಜನಪರ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗಳು ಜನಪರ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಮುಳಗುಂದ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗಳು ಜನಪರವಾದ ಯೋಜನೆಗಳಾಗಿವೆ ಎಂದು ಪ.ಪಂ ಸದಸ್ಯ ವಿಜಯ ನೀಲಗುಂದ ಹೇಳಿದರು.

ಅವರು ಪಟ್ಟಣದ ಬಾಲಲೀಲಾ ಮಾಹಾಂತ ಶಿವಯೋಗಿಗಳ ಗವಿಮಠದಲ್ಲಿ ಜರುಗಿದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಶಿರಹಟ್ಟಿ/ಲಕ್ಷ್ಮೇಶ್ವರ ತಾಲೂಕಾ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಮುಳಗುಂದ ಸಂಯುಕ್ತಾಶ್ರಯದಲ್ಲಿ ಸಾಮೂಹಿಕ ಲಕ್ಷ್ಮಿ ಪೂಜೆ ಕಾರ್ಯಕ್ರಮದ ನಂತರ ಸಾಧಕರನ್ನು ಗೌರವಿಸಿ ಮಾತನಾಡುತ್ತಿದ್ದರು.

ಗ್ರಾಮೀಣ ಭಾಗದ ಜನರ ಆರ್ಥಿಕ ಅಭಿವೃದ್ಧಿಪರ ಚಿಂತನ-ಮAಥನದ ಭಾಗವಾಗಿ ರೈತರ, ಮಹಿಳಾ ಸರಲೀಕರಣ, ಸಮುದಾಯದ ಅಭಿವೃದ್ಧಿಗೆ ಬೇಕಾಗುವ ಕಾರ್ಯಕ್ರಮಗಳನ್ನು ನೇರವಾಗಿ ಜನರಿಗೆ ತಲುಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದು, ಇದರಿಂದ ಜನರು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಸಹಕಾರಿಯಾಗಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿಯ ಕಾರ್ಯ ಶ್ಲಾಘನೀಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂ.ಡಿ. ಬಟ್ಟೂರ ವಹಿಸಿದ್ದರು. ಪ.ಪಂ ಸದಸ್ಯ ಎಸ್.ಸಿ. ಬಡ್ನಿ, ತಾಲೂಕಾ ಯೋಜನಾಧಿಕಾರಿ ಪುನಿತ ಓಲೇಕಾರ, ಡಾ. ಎಸ್.ಸಿ. ಚವಡಿ, ಬಸವರಾಜ ಸುಂಕಾಪೂರ, ಮುಳಗುಂದ ವಲಯ ಮೇಲ್ವಿಚಾರಕಿ ಬಿ.ಶಾಂತಾ, ಯೋಗ ಶಿಕ್ಷಕ ಪ್ರಕಾಶ ಮದ್ದಿನ, ಶಿವಾನಂದ ಹುಣಶಿಮರದ ಹಾಗೂ ಸೇವಾ ಪ್ರತಿನಿದಿಗಳು ಇದ್ದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!