ಬೆಂಗಳೂರು:- ಇಲ್ಲಿನ ಮದರಸಾದಲ್ಲಿ ಬಾಲಕಿ ಮೇಲೆ ಹಲ್ಲೆ ನಡೆದ ಕೇಸ್ ಗೆ ಸಂಬಧಪಟ್ಟಂತೆ ದೂರು ಕೊಟ್ಟ ಪೋಷಕರಿಗೆ ಕೊಲೆ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ.
ಅನ್ವರ್ ಅಲಿ, ಹಸನ್ ಮುಸ್ಮಿಲ್ ವಿರುದ್ಧ ಜೀವ ಬೆದರಿಕೆ ಹಾಕಿದ ಆರೋಪ ಮಾಡಲಾಗಿದೆ. ಈ ಸಂಬಂಧ ಸಂತ್ರಸ್ತರ ಬಾಲಕಿಯ ತಾಯಿ ಯಶವಂತಪುರ ಠಾಣೆಗೆ ದೂರು ನೀಡಿದ್ದಾರೆ.
ಹಲ್ಲೆ ವಿಚಾರವಾಗಿ ನೀಡಿರುವ ಕೇಸ್ ವಾಪಸ್ ಪಡೆದುಕೊಳ್ಳಬೇಕು. ಇಲ್ಲವಾದರೆ ಕೊಲೆ ಮಾಡುವುದಾಗಿ ಮದರಸಾದವರು ಫೋನ್ ಮೂಲಕ ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತರು ಆರೋಪಿಸಿದ್ದಾರೆ. ಬಾಲಕಿಯ ತಾಯಿ ನೀಡಿರುವ ದೂರನ್ನು ದಾಖಲಿಸಿಕೊಂಡಿರುವ ಯಶವಂತಪುರ ಠಾಣೆ ಪೊಲೀಸರು ಎನ್ಸಿಆರ್ ದಾಖಲಿಸಿಕೊಂಡಿದ್ದಾರೆ.
ಹಸನ್ ಎಂಬಾತ ಕೆಲ ದಿನಗಳ ಹಿಂದೆ ಮದರಸಾದಲ್ಲಿ ಹೆಣ್ಣು ಮಕ್ಕಳ ಮೇಲೆ ಹಲ್ಲೆ ಮಾಡಿದ್ದ. ಹಲ್ಲೆ ನಡೆಸಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ನಂತರ ಆರೋಪಿ ಹಸನ್ನನ್ನು ಕೊತ್ತನೂರು ಠಾಣೆ ಪೊಲೀಸರು ಬಂಧಿಸಿದ್ದರು. ಬಳಿಕ ಮದರಸಾವನ್ನು ಪೊಲೀಸರು ಬಂದ್ ಮಾಡಿಸಿದ್ದರು. ಕೇಂದ್ರ ಮಹಿಳಾ ಆಯೋಗದ ಕಮಿಟಿ ಸದಸ್ಯರು ಕೂಡ ಮದರಸಾಗೆ ಭೇಟಿ ನೀಡಿದ್ದರು. ಈ ಎಲ್ಲ ಬೆಳವಣಿಗೆಗಳ ನಂತರ, ಕೇಸ್ ವಾಪಸ್ ತೆಗೆದುಕೊಳ್ಳುವಂತೆ ಬಾಲಕಿಯ ತಾಯಿಗೆ ಬೆದರಿಕೆ ಹಾಕಲಾಗಿದೆ. ದೂರುದಾರರ ಪರ ವಕೀಲ ಹುಸೇನ್ಗೂ ಬೆದರಿಕೆ ಹಾಕಿದ ಆರೋಪ ವ್ಯಕ್ತವಾಗಿದೆ. ವಕೀಲ ಹುಸೇನ್ ನಾಲಗೆ ಕಟ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಸಂತ್ರಸ್ತೆ ಬಾಲಕಿಯ ತಾಯಿ ಆಗ್ರಹಿಸಿದ್ದಾರೆ.