Bengaluru: ಮದರಸಾದಲ್ಲಿ ಬಾಲಕಿ ಮೇಲೆ ಹಲ್ಲೆ ಕೇಸ್: ದೂರು ಕೊಟ್ಟ ಪೋಷಕರಿಗೆ ಕೊಲೆ ಬೆದರಿಕೆ ಆರೋಪ!

0
Spread the love

ಬೆಂಗಳೂರು:- ಇಲ್ಲಿನ ಮದರಸಾದಲ್ಲಿ ಬಾಲಕಿ ಮೇಲೆ ಹಲ್ಲೆ ನಡೆದ ಕೇಸ್ ಗೆ ಸಂಬಧಪಟ್ಟಂತೆ ದೂರು ಕೊಟ್ಟ ಪೋಷಕರಿಗೆ ಕೊಲೆ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ.

Advertisement

ಅನ್ವರ್​​​ ಅಲಿ, ಹಸನ್ ಮುಸ್ಮಿಲ್​ ವಿರುದ್ಧ ಜೀವ ಬೆದರಿಕೆ ಹಾಕಿದ ಆರೋಪ ಮಾಡಲಾಗಿದೆ. ಈ ಸಂಬಂಧ ಸಂತ್ರಸ್ತರ ಬಾಲಕಿಯ ತಾಯಿ ಯಶವಂತಪುರ ಠಾಣೆಗೆ ದೂರು ನೀಡಿದ್ದಾರೆ.

ಹಲ್ಲೆ ವಿಚಾರವಾಗಿ ನೀಡಿರುವ ಕೇಸ್ ವಾಪಸ್​ ಪಡೆದುಕೊಳ್ಳಬೇಕು. ಇಲ್ಲವಾದರೆ ಕೊಲೆ ಮಾಡುವುದಾಗಿ ಮದರಸಾದವರು ಫೋನ್ ಮೂಲಕ ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತರು ಆರೋಪಿಸಿದ್ದಾರೆ. ಬಾಲಕಿಯ ತಾಯಿ ನೀಡಿರುವ ದೂರನ್ನು ದಾಖಲಿಸಿಕೊಂಡಿರುವ ಯಶವಂತಪುರ ಠಾಣೆ ಪೊಲೀಸರು ಎನ್​ಸಿಆರ್​ ದಾಖಲಿಸಿಕೊಂಡಿದ್ದಾರೆ.

ಹಸನ್ ಎಂಬಾತ ಕೆಲ ದಿನಗಳ ಹಿಂದೆ ಮದರಸಾದಲ್ಲಿ ಹೆಣ್ಣು ಮಕ್ಕಳ ಮೇಲೆ ಹಲ್ಲೆ ಮಾಡಿದ್ದ. ಹಲ್ಲೆ ನಡೆಸಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ನಂತರ ಆರೋಪಿ ಹಸನ್​ನನ್ನು ಕೊತ್ತನೂರು ಠಾಣೆ ಪೊಲೀಸರು ಬಂಧಿಸಿದ್ದರು. ಬಳಿಕ ಮದರಸಾವನ್ನು ಪೊಲೀಸರು ಬಂದ್ ಮಾಡಿಸಿದ್ದರು. ಕೇಂದ್ರ ಮಹಿಳಾ ಆಯೋಗದ ಕಮಿಟಿ ಸದಸ್ಯರು ಕೂಡ ಮದರಸಾಗೆ ಭೇಟಿ ನೀಡಿದ್ದರು. ಈ ಎಲ್ಲ ಬೆಳವಣಿಗೆಗಳ ನಂತರ, ಕೇಸ್ ವಾಪಸ್ ತೆಗೆದುಕೊಳ್ಳುವಂತೆ ಬಾಲಕಿಯ ತಾಯಿಗೆ ಬೆದರಿಕೆ ಹಾಕಲಾಗಿದೆ. ದೂರುದಾರರ ಪರ ವಕೀಲ ಹುಸೇನ್​​​ಗೂ ಬೆದರಿಕೆ ಹಾಕಿದ ಆರೋಪ ವ್ಯಕ್ತವಾಗಿದೆ. ವಕೀಲ ಹುಸೇನ್​​ ನಾಲಗೆ ಕಟ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಸಂತ್ರಸ್ತೆ ಬಾಲಕಿಯ ತಾಯಿ ಆಗ್ರಹಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here