HomeChikkamagaluruಹಂಚಿ ಉಣ್ಣುವುದು ಭಾರತೀಯ ಸಂಸ್ಕೃತಿ

ಹಂಚಿ ಉಣ್ಣುವುದು ಭಾರತೀಯ ಸಂಸ್ಕೃತಿ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಬಾಳೆಹೊನ್ನೂರು: ಮನುಷ್ಯನ ಜೀವನಾಧಾರಕ್ಕೆ ನೀರು, ಅನ್ನ, ಗಾಳಿ ಮುಖ್ಯವಾಗಿರುವಂತೆ ಆದರ್ಶ ವ್ಯಕ್ತಿಯಾಗಿ ಬಾಳಲು ಸಜ್ಜನರ ನುಡಿಗಳು ಮುಖ್ಯ. ಹಸಿದು ಉಣ್ಣುವುದು ಪ್ರಕೃತಿಯ ಧರ್ಮ. ಹಂಚಿ ಉಣ್ಣುವುದು ಸಂಸ್ಕೃತಿಯ ಲಕ್ಷಣವೆಂದು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.

ಅವರು ಮಂಗಳವಾರ ಸಂಜೆ ಶ್ರೀ ಜಗದ್ಗುರು ರಂಭಾಪುರಿ ಪೀಠದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ ಮಹಾರಥೋತ್ಸವದ ಅಂಗವಾಗಿ ಜರುಗಿದ ಕೃಷಿ ಮೇಳ, ಚಿಂತನ-ಮಂಥನ ಸಮಾರೋಪ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.

ಕೃಷಿ ಪ್ರಧಾನವಾದ ಭಾರತ ದೇಶದಲ್ಲಿ ರೈತರ ಪಾತ್ರ ಬಹು ಮುಖ್ಯವಾದುದು. ಸಾಂಪ್ರದಾಯಕವಾಗಿ ಬೆಳೆದು ಬಂದ ಕೃಷಿ ಇಂದು ಆಧುನಿಕ ವ್ಯವಸ್ಥೆಯಲ್ಲಿ ಬಹಳಷ್ಟು ಪ್ರಗತಿಪಥದಲ್ಲಿ ನಡೆಯುತ್ತಿದೆ. ಶ್ರೀಮಂತ ರೈತರಿಗೆ ಮಾತ್ರ ಆಧುನಿಕ ಸೌಲಭ್ಯ ಕೃಷಿ ಮಾಡಲು ಸಾಧ್ಯ. ಸಾಮಾನ್ಯ ಬಡ ರೈತ ಉದ್ಧಾರವಾಗಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪ್ರಾಮಾಣಿಕ ಪ್ರಯತ್ನ ಮಾಡುವ ಅವಶ್ಯಕತೆಯಿದೆ. ಮಲೆನಾಡಿನ ಪ್ರಮುಖ ಬೆಳೆಗಳಾದ ಕಾಫಿ, ಅಡಿಕೆ ಮತ್ತು ಮೆಣಸು ಇನ್ನಿತರ ಉಪ ಬೆಳೆಗಳನ್ನು ಬೆಳೆಸುವ ನಿಟ್ಟಿನಲ್ಲಿ ರೈತರು ಶ್ರಮವಹಿಸಿ ದುಡಿಯುತ್ತಿದ್ದಾರೆ. ಆದರೆ ಕೆಲವು ಸಂದರ್ಭದಲ್ಲಿ ಮಳೆ-ಬೆಳೆಯಿಲ್ಲದೇ, ಯೋಗ್ಯ ಬೆಲೆ ಸಿಗದೇ ಸಾಲದ ಸುಳಿಯಲ್ಲಿ ಸಿಕ್ಕು ನಲುಗಿದವರೂ ಉಂಟು. ಕಡಿಮೆ ವೆಚ್ಚದಲ್ಲಿ ಹೆಚ್ಚು ಆದಾಯ ಬರುವ ಬೆಳೆಗಳನ್ನು ಬೆಳೆಸುವತ್ತ ರೈತರು ಗಮನ ಹರಿಸಬೇಕಾಗಿದೆ ಎಂದರು.

ಸಮಾರAಭ ಉದ್ಘಾಟಿಸಿದ ಭದ್ರಾ ಕಾಡಾ ಅಧ್ಯಕ್ಷ ಡಾ. ಕೆ.ಪಿ. ಅಂಶುಮAತ್ ಮಾತನಾಡಿ, ಪ್ರಪಂಚ ಅನ್ನುವುದು ಗುಲಾಬಿ ಗಿಡದಂತೆ. ಮೂರ್ಖರು ಮುಳ್ಳನ್ನು, ಸಜ್ಜನರು ಹೂವನ್ನು ಪಡೆಯುತ್ತಾರೆ. ಸ್ವಾರ್ಥ ರಹಿತ ಬದುಕಿಗೆ ಬೆಲೆಯಿದೆ. ಶ್ರಮದಿಂದ ಗಳಿಸಿದ ಸಂಪತ್ತು ಸ್ಥಿರವಾಗಿರುತ್ತದೆ. ಶ್ರಮವಿಲ್ಲದ ಸಂಪತ್ತು ಬಯಸುವ ಜನ ಹೆಚ್ಚಾಗಿದ್ದಾರೆ. ರೈತನ ಬೆವರಿಗೆ ಬೆಲೆ ಬರುವಂತಾಗಬೇಕು. ಶ್ರೀ ರಂಭಾಪುರಿ ಪೀಠದಲ್ಲಿ ಕೃಷಿ ಮೇಳ ಹಮ್ಮಿಕೊಂಡು ರೈತ ಪರವಾದ ಚಿಂತನ-ಮಂಥನ ನಡೆಯುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದು ಹರುಷ ವ್ಯಕ್ತಪಡಿಸಿದರು.

ಡಾ. ಮಮತಾ ರಾಣಿ ಸಂಶೋಧಿತ `ಅವಿಭಜಿತ ಬೆಂಗಳೂರು ಜಿಲ್ಲೆಯ ವೀರಭದ್ರ ಆರಾಧನೆ-ಒಂದು ಅಧ್ಯಯನ’ ಕೃತಿಯನ್ನು ರಾಯಚೂರಿನ ಡಾ.ಚನ್ನಬಸವಯ್ಯ ಹಿರೇಮಠ ಬಿಡುಗಡೆ ಮಾಡಿದರು. ಇದೇ ಸಂದರ್ಭದಲ್ಲಿ ಕೃತಿಕಾರರಾದ ಡಾ. ಮಮತಾ ರಾಣಿ ಹಾಗೂ ಅಚಲೇರಿ ಹಿರೇಮಠದ ಸೂತ್ರೇಶ್ವರ ಶಿವಾಚಾರ್ಯ ಸ್ವಾಮಿಗಳನ್ನು ಸನ್ಮಾನಿಸಲಾಯಿತು.

ಮುಖ್ಯ ಅತಿಥಿಗಳಾಗಿ ಭಾಸ್ಕರ ವೆನಿಲ್ಲಾ, ಎಸ್.ಹೆಚ್. ರಾಜಶೇಖರ್, ಹೆಚ್.ಎಂ. ಲೋಕೇಶ್, ಬಿ.ಸಿ. ಗೀತಾ, ಟಿ.ಎಂ. ಉಮೇಶ ಕಲ್ಮಕ್ಕಿ, ಬಿ.ಎಸ್. ನಾಗರಾಜಭಟ್ ಭಾಗವಹಿಸಿದ್ದರು.

ಎನ್.ಆರ್. ಪುರ ತಾಲೂಕು ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಸತೀಶ್ ಜೈನ್ ಸಮ್ಮೇಳನದ ನಿರ್ಣಯ ಮಂಡಿಸಿದರು. ಚೈತನ್ಯ ವೆಂಕಿ ಶ್ರೀ ಜಗದ್ಗುರುಗಳಿಗೆ ಗೌರವ ಸಮರ್ಪಿಸಿದರು. ಬೀರೂರು ರುದ್ರಮುನಿ ಶಿವಾಚಾರ್ಯರು ಸ್ವಾಗತಿಸಿದರು. ಗಂಗಾಧರಸ್ವಾಮಿ ಹಿರೇಮಠ ವಿಠಲಾಪುರ ಪ್ರಾರ್ಥಿಸಿದರು. ಗಿರಿಜಾ ಕಲ್ಲೋಳಿಮಠ ಹಾಗೂ ಲಾವಣ್ಯ ಮಂಜುನಾಥ ನಿರೂಪಿಸಿದರು.

ನೇತೃತ್ವ ವಹಿಸಿದ ಸೂಡಿ ಜುಕ್ತಿ ಹಿರೇಮಠದ ಡಾ. ಕೊಟ್ಟೂರು ಬಸವೇಶ್ವರ ಶಿವಾಚಾರ್ಯ ಸ್ವಾಮಿಗಳು ಮಾತನಾಡಿ ವೀರಶೈವ ಧರ್ಮ ಸಂಸ್ಕೃತಿ ಮಾನವ ಜನಾಂಗದ ವಿಕಾಸಕ್ಕೆ ಅಡಿಪಾಯ. ಎಲ್ಲ ವರ್ಗ, ಸಮುದಾಯದವರ ಏಳಿಗೆಯನ್ನು ಬಯಸಿದ ಧರ್ಮ ವೀರಶೈವ. ಶ್ರೀ ಜಗದ್ಗುರು ರೇಣುಕಾಚಾರ್ಯರ ಮೂಲ ತತ್ವ-ಸಿದ್ಧಾಂತಗಳ ನೆಲೆಯಲ್ಲಿ ಬಹಳಷ್ಟು ಆಧ್ಯಾತ್ಮ ಜೀವಿಗಳು ಉಜ್ವಲ ಬದುಕನ್ನು ಕಟ್ಟಿಕೊಂಡಿದ್ದಾರೆ ಎಂದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!