ಸಚಿವರ ಬಗ್ಗೆ ಮಾತನಾಡಿದ್ರೆ ಏಕೆ ಡ್ಯಾಮೇಜ್ ಆಗುತ್ತೆ? ಅವರ ಹೆಸರು ಹೇಳಲಿ: ಸತೀಶ್ ಜಾರಕಿಹೊಳಿ

0
Spread the love

ಬೆಂಗಳೂರು: ಸಚಿವರ ಬಗ್ಗೆ ಮಾತನಾಡಿದರೆ ಏಕೆ ಡ್ಯಾಮೇಜ್ ಆಗುತ್ತೆ? ಅವರ ಹೆಸರು ಹೇಳಲಿ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ವಿಧಾನಸೌಧದಲ್ಲಿ ರನ್ಯಾ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸಿಬಿಐ ತನಿಖೆ ನಡೆಯುತ್ತಿದೆ, ಕಾಯಬೇಕು. ಏರ್‌ಪೋರ್ಟ್ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತೆ. ಅದು ಕೇಂದ್ರ ಸರ್ಕಾರದ ಜವಾಬ್ದಾರಿ.

Advertisement

ಸಚಿವರ ಬಗ್ಗೆ ಮಾತನಾಡಿದರೆ ಏಕೆ ಡ್ಯಾಮೇಜ್ ಆಗುತ್ತೆ? ಅವರ ಹೆಸರು ಹೇಳಲಿ ಎಂದು ಸವಾಲು ಹಾಕಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಡಿನ್ನರ್ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಡಿಕೆಶಿ ಅವರು ಡಿನ್ನರ್‌ಗೆ ಕರೆದಿದ್ದಾರೆ, ಹೋಗುತ್ತೇನೆ. ಹೋಗಲು ಬೇಕಾಗುತ್ತದೆ. ಅವರು ಪಾರ್ಟಿ ಹೆಸರಲ್ಲಿ ಡಿನ್ನರ್ ಕೊಡುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದರು.


Spread the love

LEAVE A REPLY

Please enter your comment!
Please enter your name here