ಬೆಂಗಳೂರು:-ಬೆಂಗಳೂರಿನ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶಾಲಿನಿ ಗ್ರೌಂಡ್ ಬಳಿ ಮೂಕ ಪ್ರಾಣಿ ಮೇಲೆ ವಿಕೃತಿ ಮೆರೆದಿರುವ ಘಟನೆ ಬೆಳಕಿಗೆ ಬಂದಿದೆ.
ಶ್ವಾನದ ಮರ್ಮಾಂಗವನ್ನು ಕೊಯ್ದು ಬಳಿಕ ಅತ್ಯಾಚಾರವೆಸಗಿ ಈ ವಿಕೃತಿ ಮೆರೆಯಲಾಗಿದೆ. ಸದ್ಯ ಸಾರ್ವಜನಿಕರು ನೋಡಿ ವ್ಯಕ್ತಿಗೆ ಥಳಿಸಿ ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. ಜಯನಗರದ ಸುತ್ತ ಮುತ್ತ ವಿದ್ಯಾ ಎಂಬುವ ಮಹಿಳೆ ಶ್ವಾನಗಳಿಗೆ ಪ್ರತಿನಿತ್ಯ ಊಟ ಹಾಕುತ್ತಾರೆ.
ಅದರಂತೆ ಮಾರ್ಚ್ 13ರ ರಾತ್ರಿ ಅದೇ ರೀತಿ ಶ್ವಾನಕ್ಕೆ ಊಟ ನೀಡಲು ಹೋಗಿದ್ದಾರೆ. ಆ ವೇಳೆ ವ್ಯಕ್ತಿಯೋರ್ವ ಶ್ವಾನದ ಜೊತೆ ಸಂಬೋಗ ಮಾಡುತ್ತಿರುವುದನ್ನು ನೋಡಿದ್ದಾರೆ. ಕೂಡಲೇ ಶ್ವಾನವನ್ನು ರಕ್ಷಣೆ ಮಾಡಿದ್ದಾರೆ. ನಂತರ ನಿನ್ನೆ ಸಂಜೆ ಅಂದ್ರೆ ಮಾರ್ಚ್ 14ರ ಸಂಜೆ ಅದೇ ಶಾಲಿನಿ ಮೈದಾನದ ಬಳಿ ಶ್ವಾನಪ್ರೀಯರು ತೆರಳಿದ್ದಾರೆ. ಈ ವೇಳೆ ಅದೇ ವ್ಯಕ್ತಿ ಕಂಡಿದ್ದಾನೆ. ಬಳಿಕ ವ್ಯಕ್ತಿಯನ್ನು ಹಿಡಿದು ಥಳಿಸಿ ಬಳಿಕ ಜಯನಗರ ಪೊಲೀಸರಿಗೆ ಒಪ್ಪಿಸಿದ್ದಾರೆ.