ಈಜಲು ತೆರಳಿ ಅವಘಡ: 14 ವರ್ಷದ ಬಾಲಕ ನೀರುಪಾಲು!

0
Spread the love

ಹಾಸನ : ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಎಂ.ದಾಸಪುರ ಗ್ರಾಮದಲ್ಲಿ ಸ್ನೇಹಿತರೊಂದಿಗೆ ಈಜಲು ತೆರಳಿದ್ದ ವಿದ್ಯಾರ್ಥಿ ನೀರುಪಾಲಾಗಿರುವ ಘಟನೆ ಜರುಗಿದೆ.

Advertisement

ಮರುವನಹಳ್ಳಿ ಗ್ರಾಮದ ಸೋಮಶೇಖರ್-ಮಣಿ ದಂಪತಿ ಪುತ್ರನಾಗಿರುವ 14 ವರ್ಷದ ಕಿರಣ್ ನೀರಿನಲ್ಲಿ ಮುಳುಗಿ ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.

ಮೃತ ವಿದ್ಯಾರ್ಥಿಯು, ಎಂ.ದಾಸಪುರ ಗ್ರಾಮದ ನಿರ್ಮಲ ವಿದ್ಯಾಶಾಲೆಯಲ್ಲಿ ಒಂಭತ್ತನೇ ತರಗತಿ ಓದುತ್ತಿದ್ದ. ಇಂದು ಮಧ್ಯಾಹ್ನ ಮೂವರು ಸ್ನೇಹಿತರೊಂದಿಗೆ ಎಂ.ದಾಸಪುರ ಗ್ರಾಮದ ಬಳಿಯಿರುವ ಕಟ್ಟೆಯಲ್ಲಿ ಈಜಲು ತೆರಳಿದ್ದಾನೆ. ಕಟ್ಟೆಯಲ್ಲಿ ಆಳವಾದ ಗುಂಡಿ ಇದ್ದುದ್ದರಿಂದ ಈಜು ಬಾರದೆ ನೀರಿನಲ್ಲಿ ಮುಳುಗಿ ಕಿರಣ್ ಸಾವನ್ನಪ್ಪಿದ್ದಾನೆ.

ಅದೃಷ್ಟವಶಾತ್ ಉಳಿದ ಮೂವರು ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದು, ಕಿರಣ್ ಮೃತದೇಹಕ್ಕಾಗಿ ಅಗ್ನಿಶಾಮಕದಳ ಸಿಬ್ಬಂದಿ ಶೋಧಕಾರ್ಯ ಕೈಗೊಂಡಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ.

ನುಗ್ಗೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.


Spread the love

LEAVE A REPLY

Please enter your comment!
Please enter your name here