ವಿಶೇಷ ಚೇತನರಿಗಾಗಿ ವಿಶೇಷ ಕ್ಷೇತ್ರ ಭೇಟಿ

0
Spread the love

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ನಮ್ಮ ಸಮಾಜದಲ್ಲಿ ವಿಶೇಷ ಚೇತನ ಮಕ್ಕಳು ಸಹ ಸಾಮಾನ್ಯ ಮಕ್ಕಳಂತೆ ಇರಬೇಕು ಎನ್ನುವ ಉದ್ದೇಶದಿಂದ ವಿಶೇಷ ಚೇತನ ಮಕ್ಕಳಿಗಾಗಿ ಹಮ್ಮಿಕೊಂಡಿದ್ದ ಈ ವಿಶೇಷ ಕ್ಷೇತ್ರ ಭೇಟಿ ಉಪಯುಕ್ತವಾದ ಕಾರ್ಯಕ್ರಮವಾಗಿದೆ. ಈ ವಿದ್ಯಾರ್ಥಿಗಳೂ ಕೂಡ ಸಾಮಾನ್ಯ ವಿದ್ಯಾರ್ಥಿಗಳಂತೆ ಕಲಿಕೆಯಲ್ಲಿ ಪಾಲ್ಗೊಳ್ಳಲು ಈ ಪ್ರವಾಸ ಸಹಾಯಕವಾಗಲಿದೆ ಎಂದು ಪುರಸಭೆ ಹಿರಿಯ ಸದಸ್ಯ ರಾಜೀವ ಕುಂಬಿ ಹೇಳಿದರು.

Advertisement

ಅವರು ಪಟ್ಟಣದ ಸರಕಾರಿ ಮಾದರಿ ಕನ್ನಡ ಹೆಣ್ಣು ಮಕ್ಕಳ ಶಾಲೆಯಲ್ಲಿ ರವಿವಾರ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿಯಲ್ಲಿ ವಿಶೇಷ ಚೇತನ ಮಕ್ಕಳಿಗಾಗಿ ಕ್ರೀಡೆ ಮತ್ತು ಅರಿವು ಮೂಡಿಸುವ ಹಾಗೂ ಕ್ಷೇತ್ರ ಭೇಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಕಾರ್ಯಕ್ರಮದ ಗುರಿ ಹಾಗೂ ಉದ್ದೇಶಗಳ ಕುರಿತು ಕ್ಷೇತ್ರ ಸಮನ್ವಯಾಧಿಕಾರಿ ಬಿ.ಎಸ್. ಭಜಂತ್ರಿ ಮಾತನಾಡಿದರು. ಬಿಆರ್‌ಪಿ ಈಶ್ವರ ಮೆಡ್ಲೇರಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ಸರಕಾರಿ ನೌಕರರ ಸಂಘದ ಅಧ್ಯಕ್ಷ ಗುರುರಾಜ ಹವಳದ, ಪ್ರಧಾನ ಕಾರ್ಯದರ್ಶಿ ಚಂದ್ರು ನೇಕಾರ, ಉಪಾಧ್ಯಕ್ಷೆ ಎಲ್.ಎ. ನಂದೆಣ್ಣವರ, ವಿಕಲಚೇತನರ ನೌಕರರ ಸಂಘದ ಜಿಲ್ಲಾಧ್ಯಕ್ಷ ಆರ್.ಎಮ್. ಶಿರಹಟ್ಟಿ, ಬಿಆರ್‌ಪಿ ಬಿ.ಎಮ್. ಯರಗುಪ್ಪಿ, ಸಿಆರ್‌ಪಿಗಳಾದ ಸತೀಶ ಬೋಮಲೆ, ಉಮೇಶ ನೇಕಾರ, ಮುಖ್ಯ ಶಿಕ್ಷಕರಾದ ಬಿ.ಎಮ್. ಕುಂಬಾರ, ಡಿ.ಎನ್. ದೊಡ್ಡಮನಿ, ಎಸ್.ಬಿ. ಲಕ್ಷ್ಮೇಶ್ವರ, ವಿ.ಎನ್. ಪಾಟೀಲ, ಶಶಿಧರ ಚಳಗೇರಿ, ನಿತ್ಯಾನಂದ ವಿರೇಶಮಠ ಹಾಗೂ ಶಿರಹಟ್ಟಿ ತಾಲೂಕಿನ ಎಲ್ಲಾ ಬಿಆಯ್‌ಇಆರ್‌ಟಿಗಳು ಹಾಜರಿದ್ದರು. ನಾಗರಾಜ ಮಜ್ಜಿಗುಡ್ಡ ವಂದಿಸಿದರು.


Spread the love

LEAVE A REPLY

Please enter your comment!
Please enter your name here