ಬಿಜೆಪಿ ಸಂಸ್ಕೃತಿಹೀನ ಪಕ್ಷ: DCM ಡಿ.ಕೆ. ಶಿವಕುಮಾರ್ ವಾಗ್ದಾಳಿ!

0
Spread the love

ಬೆಂಗಳೂರು:- ಬಿಜೆಪಿ ಸಂಸ್ಕೃತಿಹೀನ ಪಕ್ಷ. ಗೂಂಡಾಗಳಂತೆ ವರ್ತಿಸುತ್ತಿದ್ದಾರೆ ಎಂದು ಹೇಳುವ ಮೂಲಕ ಡಿಸಿಎಂ ಡಿ.ಕೆ. ಶಿವಕುಮಾರ್ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದರು.

Advertisement

ವಿಧಾನಸೌಧದಲ್ಲಿ ಮಾತನಾಡಿದ ಅವರು, “ಮುಖ್ಯಮಂತ್ರಿಗಳು ಹಾಗೂ ಗೃಹಮಂತ್ರಿಗಳು ಹನಿಟ್ರ್ಯಾಪ್ ವಿಚಾರವಾಗಿ ಹೇಳಿಕೆ ನೀಡಿದ್ದು, ಯಾರಾದರೂ ಒಬ್ಬರು ದೂರು ನೀಡಿದರೆ ಕ್ರಮ ತೆಗೆದುಕೊಳ್ಳಬಹುದು. ವಿಧಾನಸೌಧದಲ್ಲೇ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆಯೊಬ್ಬರು ದೂರಿನಲ್ಲಿ ಆರೋಪಿಸಿದ್ದಾರೆ. ಈ ವಿಚಾರ ನ್ಯಾಯಾಲಯದಲ್ಲಿದೆ. ಆದ್ರೆ ಬಾಂಬೆ ಬಾಯ್ಸ್ ನ್ಯಾಯಾಲಯದಲ್ಲಿ ತಡೆಯಾಜ್ಞೆ ತಂದಿರುವುದು ಯಾವ ಕಾರಣಕ್ಕೆ?” ಎಂದು ತಿರುಗೇಟು ನೀಡಿದರು.

ಅವರ ಬಾಣದ ಗುರಿ ಯಾರ ಕಡೆ ಇದೆ ಎಂದು ಕೇಳಿದಾಗ, “ಅವರು ಯಾರತ್ತ ಗುರಿ ಇಟ್ಟಿದ್ದಾರೋ ಗೊತ್ತಿಲ್ಲ. ಇದು ಅವರ ಸೆಲ್ಫ್ ಗೋಲ್ ಇರಬೇಕು” ಎಂದು ವ್ಯಂಗ್ಯವಾಡಿದರು.


Spread the love

LEAVE A REPLY

Please enter your comment!
Please enter your name here