ಬೆಳಗಾವಿ:- ಇಲ್ಲಿನ ನಿಪ್ಪಾಣಿ ಸಕ್ಕರೆ ಕಾರ್ಖಾನೆಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿ, ಘಟನೆಯಲ್ಲಿ ಸುಮಾರು 5 ಕೋಟಿ ನಷ್ಟವಾಗಿದೆ.
Advertisement
ಹೌದು, ಜಿಲ್ಲೆಯ ನಿಪ್ಪಾಣಿ ಪಟ್ಟಣದ ಹೊರವಲಯದಲ್ಲಿರುವ ಹಾಲಸಿದ್ದನಾಥ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯಿಂದ 24 ಟನ್ ಸಾಮರ್ಥ್ಯದ ಬಾಯ್ಲರ್ ಹೊತ್ತಿ ಉರಿದಿದೆ. ಬಾಯ್ಲರ್ನಲ್ಲಿ ಕಾಣಿಸಿಕೊಂಡ ಆಕಸ್ಮಿಕ ಬೆಂಕಿ ಕ್ಷಣಾರ್ಧದಲ್ಲಿ ಕಾರ್ಖಾನೆಗೆ ವ್ಯಾಪಕವಾಗಿ ಹರಡಿದೆ.
ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅಂದಾಜು 5 ಕೋಟಿ ರೂ. ಮೌಲ್ಯದ ಆಸ್ತಿ ಬೆಂಕಿಗಾಹುತಿಯಾಗಿದೆ. ನಿಪ್ಪಾಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.