ಬೆಂಗಳೂರು| 950 ಗ್ರಾಂ ಚಿನ್ನ ದುರ್ಬಳಕೆ ಆರೋಪ: ಪಿಎಸ್‌ಐ ಅಮಾನತು!

0
Spread the love

ಬೆಂಗಳೂರು:- ಕೇಸ್‌ವೊಂದರಿಂದ ರಿಕವರಿ ಮಾಡಿದ್ದ 950 ಗ್ರಾಂ ಚಿನ್ನವನ್ನು ದುರ್ಬಳಕೆ ಮಾಡಿಕೊಂಡ ಆರೋಪದಡಿ PSI ಓರ್ವರನ್ನು ಸಸ್ಪೆಂಡ್ ಮಾಡಿ ಬೆಂಗಳೂರಿನ ಕಮಿಷನರ್ ದಯಾನಂದ ಆದೇಶ ಹೊರಡಿಸಿದ್ದಾರೆ.

Advertisement

ಕಾಟನ್ ಪೇಟೆ ಠಾಣೆಯ ಪಿಎಸ್‌ಐ ಅಮಾನತುಗೊಂಡ ಸಿಬ್ಬಂದಿ. 2020ರಲ್ಲಿ ಸಂತೋಷ್ ಹಲಸೂರು ಗೇಟ್ ಠಾಣೆಯ ಪಿಎಸ್‌ಐ ಆಗಿದ್ದರು. ಆ ಸಮಯದಲ್ಲಿ ಕೇಸ್‌ವೊಂದರ ರಿಕವರಿ ಚಿನ್ನವನ್ನು ದುರ್ಬಳಕೆ ಮಾಡಿಕೊಂಡಿದ್ದರು. ಚಿನ್ನದ ಅಂಗಡಿ ಮಾಲೀಕನ ಬಳಿ ಹೋಗಿ ರಿಕವರಿ ಚಿನ್ನ ತೋರಿಸಬೇಕಿದೆ, ಹೀಗಾಗಿ 950 ಗ್ರಾಂ. ಚಿನ್ನದ ಗಟ್ಟಿ ಕೊಡು, ಫೋಟೊ ತೆಗೆಸಿ ವಾಪಸ್ ತಂದುಕೊಡುತ್ತೇನೆ ಎಂದು ಹೇಳಿದ್ದ.

ಸಂತೋಷ್ ಮಾತನ್ನು ನಂಬಿ ಚಿನ್ನದ ಅಂಗಡಿ ಮಾಲೀಕ 950 ಗ್ರಾಂ. ಚಿನ್ನದ ಗಟ್ಟಿಯನ್ನು ನೀಡಿದ್ದರು. ಬಳಿಕ ಮಾಲೀಕ ಚಿನ್ನ ವಾಪಸ್ ಕೇಳಿದಾಗ ಸಂತೋಷ್ ಹಣ ನೀಡುತ್ತೇನೆಂದು ಹೇಳಿ ಭದ್ರತೆಗೆ ಸೈಟ್ ಕರಾರು ಮಾಡಿಕೊಟ್ಟಿದ್ದ. ಆದರೆ ಆ ಸೈಟ್‌ನ್ನು ಬೇರೆಯವರಿಗೆ ಮಾರಾಟ ಮಾಡಿದ್ದ. ಮಾಲೀಕ ಮತ್ತೆ ಪ್ರಶ್ನಿಸಿದಾಗ ಖಾಲಿ ಚೆಕ್ ನೀಡಿದ್ದ, ಅದು ಕೂಡ ಬೌನ್ಸ್ ಆಗಿತ್ತು. ಅದಾದ ಬಳಿಕವೂ ಮಾಲೀಕ ಹಣ ಮತ್ತು ಚಿನ್ನ ಕೇಳಿದಾಗ ಸಂತೋಷ್ ಆತನಿಗೆ ಬೆದರಿಕೆ ಹಾಕಿದ್ದ. ಇದರಿಂದ ಬೇಸತ್ತ ಮಾಲೀಕ ಪಶ್ಚಿಮ ವಿಭಾಗ ಡಿಸಿಪಿಗೆ ದೂರು ನೀಡಿದ್ದರು.

ದೂರಿನ ಅನ್ವಯ ತನಿಖೆ ಕೈಗೊಳ್ಳಲಾಗಿತ್ತು. ತನಿಖೆಯಲ್ಲಿ ವಂಚನೆ ಎಸಗಿರುವುದು ಸಾಬೀತಾದ ಹಿನ್ನೆಲೆ ಸಸ್ಪೆಂಡ್ ಮಾಡಲಾಗಿದೆ.


Spread the love

LEAVE A REPLY

Please enter your comment!
Please enter your name here