ರಾಯಚೂರು:- ರಾಯಚೂರಿನ ಲಿಂಗಸುಗೂರು ಪುರಸಭೆ ಮುಖ್ಯಾಧಿಕಾರಿ ರೆಡ್ಡಿರಾಯನಗೌಡ ಅವರನ್ನು ಅಮಾನತುಗೊಳಿಸಲಾಗಿದೆ. 57.64 ಲಕ್ಷ ರೂ. ಮೊತ್ತದ ಕಾಮಗಾರಿಯಲ್ಲಿ ಭ್ರಷ್ಟಾಚಾರ ಆರೋಪದ ಹಿನ್ನೆಲೆ ಸಸ್ಪೆಂಡ್ ಮಾಡಲಾಗಿದೆ.
Advertisement
ದುರುಗರಾಜ್ ವಟಗಲ್ ಎಂಬುವವರು ದೂರು ಆಧರಿಸಿ ತನಿಖೆ ನಡೆಸಲಾಗಿದ್ದು, ಈ ವೇಳೆ ಆರೋಪಗಳು ಸಾಬೀತಾಗಿದೆ. ಕರ್ತವ್ಯಲೋಪ, ಹಣ ದುರ್ಬಳಕೆ, ಭ್ರಷ್ಟಾಚಾರ ಆರೋಪದಡಿ ರಾಯಚೂರು ಜಿಲ್ಲಾಧಿಕಾರಿ ನಿತೀಶ್.ಕೆ ಅವರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಈ ಹಿಂದೆ ಮಸ್ಕಿ ಪುರಸಭೆಯ ಮುಖ್ಯಾಧಿಕಾರಿಯಾಗಿದ್ದಾಗ ಈ ಪ್ರಕರಣ ನಡೆದಿತ್ತು. ಕ್ರಿಯಾಯೋಜನೆಯಲ್ಲಿ ಇಲ್ಲದ ಕಾಮಗಾರಿಯನ್ನು ನಡೆಸಿ ಆರ್ಥಿಕ ನಷ್ಟವಾಗಿತ್ತು. ಜೊತೆಗೆ ಪೀಠೋಪಕರಣಗಳ ಅಳವಡಿಕೆಯಲ್ಲಿ ನಿಯಮ ಉಲ್ಲಂಘಿಸಿದ್ದರು. ಈ ಹಿನ್ನೆಲೆ ದುರುಗರಾಜ್ ವಟಗಲ್ ಎಂಬುವವರು ದೂರು ನೀಡಿದ್ದರು.