HomeGadag Newsಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಗದುಗಿನ ಶಿಕ್ಷಣಪ್ರೇಮಿ, ತ್ಯಾಗಜೀವಿ ಬಿ.ಜಿ. ಅಣ್ಣಿಗೇರಿ ಗುರುಗಳ ಆಶ್ರಮದಲ್ಲಿ 2025-26ನೇ ಶೈಕ್ಷಣಿಕ ವರ್ಷದಲ್ಲಿ ಟ್ಯೂಶನ್ ಪಡೆದುಕೊಂಡು ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನು ಪಡೆಯುವ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಬಿ.ಜಿ.ಅಣ್ಣಿಗೇರಿ ಗುರುಗಳ ಪ್ರತಿಭಾ ಪ್ರತಿಷ್ಠಾನವು ವಿಶೇಷ ಪುರಸ್ಕಾರವನ್ನು ನೀಡಲಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಶಿವಕುಮಾರ ಪಾಟೀಲ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯದಲ್ಲಿ ಮೊದಲ 10 ರ‍್ಯಾಂಕ್‌ಗಳಲ್ಲಿ ತೇರ್ಗಡೆಯಾಗುವ ಆಶ್ರಮದಲ್ಲಿ ಟ್ಯೂಶನ್ ಪಡೆದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗೆ 1 ಲಕ್ಷ ರೂ.ಗಳ ಪುರಸ್ಕಾರ, 100 ರ‍್ಯಾಂಕ್‌ಗಳಲ್ಲಿ ತೇರ್ಗಡೆಯಾಗುವ ವಿದ್ಯಾರ್ಥಿಗೆ 50 ಸಾವಿರ ರೂ.ಗಳ ಪುರಸ್ಕಾರ, 500 ಸ್ಥಾನಗಳಲ್ಲಿ ತೇರ್ಗಡೆಯಾಗುವ ವಿದ್ಯಾರ್ಥಿಗೆ 25 ಸಾವಿರ ರೂ.ಗಳ ಪುರಸ್ಕಾರ ಹಾಗೂ ಒಂದು ಸಾವಿರ ಸ್ಥಾನಗಳಲ್ಲಿ ತೇರ್ಗಡೆಯಾಗುವ ವಿದ್ಯಾರ್ಥಿಗೆ 10 ಸಾವಿರ ರೂ.ಗಳ ಪುರಸ್ಕಾರ ನೀಡಿ ಗೌರವಿಸಲಾಗುವದು.

ಟ್ಯೂಶನ್ ಹಾಗೂ ಪ್ರತಿಭಾ ಪುರಸ್ಕಾರಗಳಿಂದ ವಂಚಿತರಾಗುವ ಗ್ರಾಮೀಣ ಪ್ರದೇಶದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹಿಸಬೇಕೆಂಬ ಮಹದಾಸೆಯನ್ನು ಹೊಂದಿದ್ದ ಬಿ.ಜಿ. ಅಣ್ಣಿಗೇರಿ ಗುರುಗಳ ಕನಸನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಪ್ರತಿಭಾ ಪ್ರತಿಷ್ಠಾನದ ಗೌರವ ಅಧ್ಯಕ್ಷರಾದ ಪೂಜ್ಯ ಜ. ಡಾ. ಸಿದ್ದರಾಮ ಮಹಾಸ್ವಾಮಿಗಳ ಮಾರ್ಗದರ್ಶನದಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದ್ದು, ವಿದ್ಯಾರ್ಥಿಗಳು ಈಗಿನಿಂದಲೇ ಅಭ್ಯಾಸದಲ್ಲಿ ತೊಡಗಬೇಕೆಂಬುದು ಪ್ರತಿಷ್ಠಾನದ ಸದಾಶಯವಾಗಿದೆ.

ಗದಗ ಪರಿಸರದಲ್ಲಿ ಕಳೆದ 60 ವರ್ಷಗಳಿಂದ 8, 9 ಹಾಗೂ 10ನೇ ತರಗತಿಯ ವಿದ್ಯಾರ್ಥಿಗಳಿಗೆ, ಅದರಲ್ಲೂ ವಿಶೇಷವಾಗಿ ಗ್ರಾಮೀಣ ಪ್ರದೇಶದವರಿಗೆ ಉಚಿತ ಟ್ಯೂಶನ್ ಎಂಬ ಹೆಗ್ಗಳಿಕೆಯೊಂದಿಗೆ ಮೌಲ್ಯಯುತ ಶಿಕ್ಷಣ ನೀಡುವ ಮೂಲಕ ಬಿ.ಜಿ. ಅಣ್ಣಿಗೇರಿ ಗುರುಗಳ ನಂತರವೂ ಅವರ ಶಿಷ್ಯ ಬಳಗ, ಗುರುಬಳಗ ಆಶ್ರಮದಲ್ಲಿ ಟ್ಯೂಶನ್ ಹೇಳುವ ಕೈಂಕರ್ಯವನ್ನು ಮುನ್ನಡೆಸುವ ಮೂಲಕ ಗುರುನಮನಕ್ಕೆ ಮುಂದಾಗಿದ್ದಾರೆ.

8, 9 ಹಾಗೂ 10ನೇ ತರಗತಿಯ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಏಪ್ರಿಲ್ 1ರಿಂದ ಬೇಸಿಗೆಯ ಟ್ಯೂಶನ್ ವರ್ಗಗಳನ್ನು ಆರಂಭಿಸಲಿದೆ. ವಿಶೇಷವಾಗಿ 8ನೇ ತರಗತಿಗೆ ಪ್ರವೇಶ ಪಡೆದಿರುವ ಗ್ರಾಮೀಣ ಪ್ರದೇಶದ ಆಯ್ದ 20 ಬಡ ವಿದ್ಯಾರ್ಥಿಗಳಿಗೆ 10ನೇ ತರಗತಿಯವರೆಗೂ ಅಣ್ಣಿಗೇರಿ ಗುರುಗಳ ಆಶ್ರಮದಲ್ಲಿ ಉಚಿತ ಟ್ಯೂಶನ್‌ನೊಂದಿಗೆ ಉಚಿತ ಊಟ ಮತ್ತು ಉಚಿತ ವಸತಿ ಸೌಲಭ್ಯವಿದೆ. (ವಿದ್ಯಾರ್ಥಿನಿಯರಿಗೆ ವಸತಿಗೆ ಅವಕಾಶವಿಲ್ಲ)

ಅನುಭವಿ ಶಿಕ್ಷಕರ ತಂಡವು ಉಚಿತ ಟ್ಯೂಶನ್ ಹೇಳಲಿದ್ದು, ಆಸಕ್ತ ವಿದ್ಯಾರ್ಥಿಗಳು ಬಿ.ಜಿ. ಅಣ್ಣಿಗೇರಿ ಗುರುಗಳ ಆಶ್ರಮ, ಡಾ. ಪಂ. ಪುಟ್ಟರಾಜ ಗವಾಯಿಗಳ ಪುತ್ಥಳಿ ಹತ್ತಿರ (ಭೂಮರಡ್ಡಿ ಸರ್ಕಲ್) ಗದಗ, ಫೋನ್ ನಂ: 9902652860, 9481008700, 9480555766, 8495877018 ಇಲ್ಲಿಗೆ ಸಂಪರ್ಕಿಸಿ ಹೆಸರು ನೋಂದಾಯಿಸಲು ಶಿವಕುಮಾರ ಪಾಟೀಲ ತಿಳಿಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!