ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಜಾಗತಿಕ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಾಲ ಕಾಲಕ್ಕೆ ಸರಿಯಾಗಿ ಮಳೆಯಾಗುತ್ತಿಲ್ಲ. ಇದರಿಂದ ಪರಿಸರದಲ್ಲಿ ಸಾಕಷ್ಟು ದುಷ್ಪರಿಣಾಮಗಳು ಉಂಟಾಗುತ್ತಿದ್ದು, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿಯಾಗಿದೆ ಎಂದು ನರೇಗಲ್ಲ ಹಿರೇಮಠದ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಸಮೀಪದ ಮಾರನಬಸರಿ ಗ್ರಾಮದಲ್ಲಿ ಸೋಮವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ನಮ್ಮೂರ ನಮ್ಮ ಕೆರೆಯ 785ನೇ ಕೆರೆ ಹಸ್ತಾಂತರ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಅಶೀರ್ವಚನ ನೀಡಿದರು.
ನಮ್ಮ ಪೂರ್ವಜರು ಊರಿಗೊಂದು ಕೆರೆ ನಿರ್ಮಿಸಿ, ಅದರ ಸುತ್ತಲೂ ಗಿಡಮರಗಳನ್ನು ಬೆಳೆಸುವ ಮೂಲಕ ಪ್ರಕೃತಿ ಸಮತೋಲನಕ್ಕೆ ಕಾರಣರಾಗಿದ್ದರು. ಕೆರೆ ಉಳಿದರೆ ಅಂತರ್ಜಲ ಹೆಚ್ಚುತ್ತದೆ. ಮರ ಗಿಡಗಳಿಂದ ಮಳೆಯಾಗುತ್ತದೆ. ಪ್ರತಿಯೊಂದು ಗ್ರಾಮದ ಜನರು ಸ್ವ ಇಚ್ಛೆಯಿಂದ ಕೆರೆ ಉಳಿಸುವ, ಮರ ಗಿಡಗಳನ್ನು ಬೆಳೆಸುವ ಕಾರ್ಯ ಮಾಡಬೇಕು ಎಂದರು.
ನಿಡಗುAದಿಕೊಪ್ಪ ಶಾಖಾ ಶಿವಯೋಗ ಮಂದಿರದ ಅಭಿನವ ಚನ್ನಬಸವ ಸ್ವಾಮೀಜಿ ಮಾತನಾಡಿ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸರ್ಕಾರದಿಂದಲೂ ಆಗಲಾರದಂತಹ ಕಾಮಗಾರಿಗಳನ್ನು ಕೆಲವೇ ಪ್ರಮಾಣದ ಅನುದಾನದಲ್ಲಿ ನಿಸ್ವಾರ್ಥವಾಗಿ, ಅಚ್ಚುಕಟ್ಟಾಗಿ ಮಾಡಲಾಗುತ್ತಿದೆ. ಅದು ಯೋಜನೆಯ ಶಿಸ್ತು ಮತ್ತು ಪ್ರಾಮಾಣಿಕತೆಯನ್ನು ಎತ್ತಿ ತೋರಿಸುತ್ತದೆ ಎಂದರು.
ಪ್ರಾದೇಶಿಕ ನಿರ್ದೇಶಕ ಚಂದ್ರಶೇಖರ ಜೆ, ಜಿಲ್ಲಾ ನಿರ್ದೇಶಕ ಯೋಗೇಶ್ ಎ, ತಾಲೂಕಾ ಯೋಜನಾಧಿಕಾರಿ ಮಹಾಬಲೇಶ್ವರ ಪಟಗಾರ, ಗ್ರಾ.ಪಂ ಸದಸ್ಯ ಶಿವಕುಮಾರ ದಿಂಡೂರ, ಕೆರೆ ಸಮಿತಿ ಅಧ್ಯಕ್ಷ ಚಂದ್ರು ಮಾರನಬಸರಿ ಮಾತನಾಡಿದರು.
ಕೃಷಿ ಮೇಲ್ವಿಚಾರಕ ಶಂಭುಲಿAಗ ವರದಿವಾಚನ ಮಾಡಿದರು. ಗ್ರಾ.ಪಂ ಅಧ್ಯಕ್ಷ ವೀರಣ್ಣ ಮರಡಿ, ಶ್ರೀಕಾಂತ ಕುಲಕರ್ಣಿ, ಶ್ರೀಶೈಲಯ್ಯ ಶಾಂತಗಿರಿಮಠ, ಶಿವಶರಣಪ್ಪ ಹಾದಿಮನಿ, ಉಮೇಶ ಜಾಲಿಹಾಳ, ಕವಿತಾ ಒಣಗೇರಿ, ಲಲಿತಾ ಮಾರನಬಸರಿ ಉಪಸ್ಥಿತರಿದ್ದರು. ವಲಯದ ಮೇಲ್ವಿಚಾರಕ ರಾಘವೇಂದ್ರ ಗುಡಿ ಸ್ವಾಗತಿಸಿದರು. ವಿಜಯಲಕ್ಷ್ಮೀ ಹಾದಿಮನಿ ನಿರ್ವಹಿಸಿದರು.