ಹನಿಟ್ರ್ಯಾಪ್ ಪ್ರಕರಣ: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!

0
Spread the love

ಬೆಂಗಳೂರು: ಕರ್ನಾಟಕದಲ್ಲಿ ಮಾತ್ರವಲ್ಲ ರಾಷ್ಟ್ರಮಟ್ಟದಲ್ಲಿ ಚರ್ಚೆಯಾಗುತ್ತಿರುವ ಸಚಿವ ಕೆಎನ್​ ರಾಜಣ್ಣ ಆರೋಪಿಸಿರುವ ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾಯರ್​ ವಿನಯ್ ಕುಮಾರ್ ಸಿಂಗ್​​ ಎಂಬುವವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್​​ ಬುಧವಾರ ವಜಾಗೊಳಿಸಿ ಆದೇಶ ಹೊರಡಿಸಿದೆ.

Advertisement

ನೀವು ಜಾರ್ಖಂಡ್​​ನವರು ನಿಮಗೇನು ಸಂಬಂಧ? ಪೊಲಿಟಿಕಲ್ ನಾನ್​ಸೆನ್ಸ್​ಗಳನ್ನೆಲ್ಲಾ ವಿಚಾರಣೆ ಮಾಡಲು ಆಗಲ್ಲ. ಜಡ್ಜ್​ಗಳು ಏಕೆ ಹನಿಟ್ರ್ಯಾಪ್​​ಗೆ ಒಳಗಾಗುತ್ತಾರೆ, ಅದನ್ನು ಜಡ್ಜ್​ಗಳು ನೋಡಿಕೊಳ್ಳುತ್ತಾರೆ ನಿಮಗೇನು ಸಂಬಂಧ ಎಂದು ಸುಪ್ರೀಂ ಪ್ರಶ್ನೆ ಮಾಡಿದೆ.

ರಾಜ್ಯ ರಾಜಕೀಯದಲ್ಲಿ ಸಚಿವರ ಹನಿಟ್ರ್ಯಾಪ್ ಯತ್ನದ ವಿಚಾರ ಸಾಕಷ್ಟು ಕೋಲಾಹಲ ಸೃಷ್ಟಿಸಿತ್ತು. ಇದರ ಬೆನ್ನಲ್ಲೇ ಪ್ರಕರಣ ಕುರಿತು ತನಿಖೆಗೆ ಆಗ್ರಹಿಸಿ ಇತ್ತೀಚೆಗೆ ಸುಪ್ರೀಂಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು.

ಈ ಬಗ್ಗೆ ಇಂದು ಸುಪ್ರೀಂಕೋರ್ಟ್ ವಿಚಾರಣೆ ಮಾಡಿದೆ. ಹಿರಿಯ ಸಚಿವರು, ಶಾಸಕರು, ರಾಜಕೀಯ ಮುಖಂಡರು ಮತ್ತು ನ್ಯಾಯಾಧೀಶರ ಹನಿಟ್ರ್ಯಾಪ್​​ ಆರೋಪಗಳ ಬಗ್ಗೆ ಅರ್ಜಿದಾರರು ವಾದವನ್ನು ಮಂಡಿಸಿದರು. ವಾದ-ವಿವಾದ ಆಲಿಸಿದ ಸುಪ್ರೀಂಕೋರ್ಟ್ ಲಾಯರ್​ ವಿನಯ್ ಕುಮಾರ್ ಸಿಂಗ್​​ ಎಂಬುವವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಿದೆ.

 


Spread the love

LEAVE A REPLY

Please enter your comment!
Please enter your name here