ನಾನೇ ಯತ್ನಾಳ್‍ʼರನ್ನ ಕಾಂಗ್ರೆಸ್‍ಗೆ ಕರೆದುಕೊಂಡು ಬರುತ್ತೇನೆ: ಶಾಸಕ ರಾಜು ಕಾಗೆ

0
Spread the love

ಹುಬ್ಬಳ್ಳಿ: ನಾನೇ ಯತ್ನಾಳ್‍ʼರನ್ನ ಕಾಂಗ್ರೆಸ್‍ಗೆ ಕರೆದುಕೊಂಡು ಬರುತ್ತೇನೆ ಎಂದು ಶಾಸಕ ರಾಜು ಕಾಗೆ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನಾನೇ ಯತ್ನಾಳ್‍ರನ್ನ ಕಾಂಗ್ರೆಸ್‍ಗೆ ಕರೆದುಕೊಂಡು ಬರುತ್ತೇನೆ. ಈ ಬಗ್ಗೆ ಹೈಕಮಾಂಡ್ ಜೊತೆ ಚರ್ಚಿಸುತ್ತೇನೆ ಎಂದಿದ್ದಾರೆ.

Advertisement

ಬೆಲೆ ಏರಿಕೆ ವಿಚಾರವಾಗಿ, ಬೆಲೆ ಏರಿಕೆ ಅಷ್ಟು ಹೊರೆ ಆಗುವುದಿಲ್ಲ. ನಮಗೂ ಇತಿ ಮಿತಿ ಇದೆ. ಹೊಸ ಬಸ್ ನಿಲ್ದಾಣದ ನಿರ್ಮಾಣ, ಹೊಸ ಬಸ್ ಖರೀದಿ ಮಾಡುತ್ತಿದ್ದೆವೆ. ವ್ಯವಸ್ಥೆಯನ್ನು ಸರಿ ಮಾಡಬೇಕು. ಲಾಭ ನಷ್ಟವಿಲ್ಲದೇ ಸಂಸ್ಥೆ ನಡೆಯಬೇಕು ಎಂದು ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಕಾಂಗ್ರೆಸ್‍ನ ಐದು ಗ್ಯಾರಂಟಿ ಜನರಿಗೆ ಉಪಯೋಗ ಆಗುತ್ತಿದೆ. ಯಾರು ವಿರೋಧ ಮಾಡುತ್ತಿದ್ದರೋ ಅವರೇ ಈಗ ನಮ್ಮನ್ನು ನಕಲು ಮಾಡುತ್ತಿದ್ದಾರೆ. ಇನ್ನೂ ಸರ್ಕಾರದಲ್ಲಿ ಅಡೆತಡೆಗಳು ಸಹಜ. ಇದೆಲ್ಲ ಮೀರಿ ಸಿಎಂ ಸಿದ್ದರಾಮಯ್ಯ ಪಾರದರ್ಶಕವಾಗಿ ಆಡಳಿತ ನಡೆಸುತ್ತಿದ್ದಾರೆ ಎಂದರು.


Spread the love

LEAVE A REPLY

Please enter your comment!
Please enter your name here