ಶ್ರೀ ಮಾರುತೇಶ್ವರ ಜಾತ್ರೆ ಎಪ್ರಿಲ್ 2ಕ್ಕೆ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಸಮಿಪದ ತಿಮ್ಮಾಪೂರ ಗ್ರಾಮದಲ್ಲಿ ಯುಗಾದಿ ಹಬ್ಬದ ಅಂಗವಾಗಿ ಶ್ರೀ ಮಾರುತೇಶ್ವರ ಮಹಾ ರಥೋತ್ಸವ ಎಪ್ರಿಲ್ 2ರಂದು ಜರುಗಲಿದೆ. ಅಂದು ಮಾರುತೇಶ್ವರ ದೇವರ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಸಂಜೆ 5.30ಕ್ಕೆ ಮಹಾ ರಥೋತ್ಸವ ಜರುಗಲಿದೆ.

Advertisement

ಇದಕ್ಕೂ ಮುನ್ನ ಮಾರ್ಚ್ 29ರಂದು ದೇವಸ್ಥಾನದಲ್ಲಿ ಅಮಾವಾಸ್ಯೆ ಪೂಜೆ, ಮಾ.30ರಂದು ಪಾಂಡ್ಯಹ ಗೋಪಾಳ ದಾಸಂಗ ತುಂಬಿಸುವುದು, ಮಾ.31ರಂದು ದೀಪ ಮಾಲಿ ಕಂಬಕ್ಕೆ ಪಂಚಾಮೃತ ಅಭಿಷೇಕ ಹಾಗೂ ಎಪ್ರಿಲ್ 1ರಂದು ರಾತ್ರಿ 9.30 ಗಂಟೆಗೆ ಬಣ್ಣದ ಹೊಂಡ ತುಳಿಕಿಸುವುದು, ನಂತರ ಲಘು ರಥೋತ್ಸವ ಜರುಗಲಿದೆ.

ಜಾತ್ರಾ ಮಹೋತ್ಸವದ ಪ್ರಯುಕ್ತ ಶ್ರೀ ಲಕ್ಷ್ಮೀನಾರಾಯಣ ಹಾಗೂ ಶ್ರೀ ಬೀರಲಿಂಗೇಶ್ವರ ಕಲಾವಿದರಿಂದ `ಸಾಕು ಮಗನ ಗೋಳಾಟ’ ಎಂಬ ಸಾಮಾಜಿಕ ನಾಟಕ ಪ್ರದರ್ಶನ, ಜೈ ಹನುಮಾನ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ, ತಿಮ್ಮಾಪೂರ ಪಿ.ಕೆ ಪ್ರೀಮಿಯರ್ ಲೀಗ್ ವತಿಯಿಂದ ಕ್ರಿಕೆಟ್ ಪಂದ್ಯಾವಳಿ ಹಾಗೂ 1997ರ ತಂಡದ ವಿದ್ಯಾರ್ಥಿಗಳಿಂದ ಸಂಗೀತ ರಸಮಂಜರಿ ಕಾರ್ಯಕ್ರಮಗಳು ಜರುಗಲಿವೆ ಎಂದು ಜಾತ್ರಾ ಟ್ರಸ್ಟ್ ಕಮಿಟಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here