ಧಾರವಾಡ: ನಮ್ಮ ದೇವರನ್ನು ನಂಬದೇ ಇರುವವರ ಜೊತೆ ನಾವು ವ್ಯಾಪಾರ ಮಾಡಬಾರದು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ಹಿಂದೂಗಳು ಶುದ್ಧ ಮತ್ತು ಪವಿತ್ರವಾಗಿರುವ ವಸ್ತುಗಳನ್ನು ಖರೀದಿ ಮಾಡಿ ದೇವರಿಗೆ ಸಮರ್ಪಿಸಬೇಕು. ಗೋ ಹಂತಕರ, ಭಕ್ಷಕರ ಜೊತೆ ವ್ಯಾಪಾರ ಮಾಡಿ ಯುಗಾದಿಯನ್ನು ಹಲಾಲ್ ಮಾಡಬಾರದು.
ಮುಸ್ಲಿಂ ವ್ಯಾಪಾರಿಗಳು ವಸ್ತುಗಳ ಮೇಲೆ ಉಗುಳಿ ಹೇಸಿಗೆ ಮಾಡುತ್ತಾರೆ. ಅಂತವರ ಬಳಿ ನಾವು ಯಾಕೆ ವ್ಯಾಪಾರ ಮಾಡಬೇಕು? ಅಂತದನ್ನು ತೆಗೆದುಕೊಂಡು ನೈವೇದ್ಯ ಮಾಡಿ, ಪೂಜೆ ಮಾಡುವುದು ಸರಿಯಲ್ಲ. ಇದು ಶಾಸ್ತ್ರದ ವಿರುದ್ಧವಾದದ್ದು. ನಮ್ಮ ದೇವರನ್ನು ನಂಬದೇ ಇರುವವರ ಜೊತೆ ನಾವು ವ್ಯಾಪಾರ ಮಾಡಬಾರದು ಎಂದರು.
ಬಸನಗೌಡ ಪಾಟೀಲ್ ಯತ್ನಾಳ್ ಅವರ ಉಚ್ಚಾಟನೆಯ ಕುರಿತು ಪ್ರತಿಕ್ರಿಯಿಸಿ, ಉಚ್ಚಾಟನೆ ಪ್ರಕ್ರಿಯೆಯನ್ನು ಬಿಜೆಪಿ ವರಿಷ್ಠರು ಮರು ಪರಿಶೀಲಿಸಬೇಕು. ಇದು ಪಕ್ಷದ ಆಂತರಿಕ ವಿಚಾರ. ಇಡೀ ದೇಶದಲ್ಲಿ ಇರುವ ಬಿಜೆಪಿಯು ಹಿಂದುತ್ವದ ಪಕ್ಷ. ಆದರೆ, ಸದ್ಯ ಪಕ್ಷದಲ್ಲಿ ಆಗುತ್ತಿರುವ ಬೆಳವಣಿಗೆ ದುರದೃಷ್ಟಕರ ಎಂದರು.