ರಾಜ್ಯದಲ್ಲಿ ಉಸಿರಾಡುವ ಗಾಳಿಗೆ ಟ್ಯಾಕ್ಸ್ ಹಾಕಬಹುದು: ಸರ್ಕಾರದ ವಿರುದ್ಧ ಸಿ.ಟಿ.ರವಿ ಕಿಡಿ

0
Spread the love

ನವದೆಹಲಿ: ರಾಜ್ಯದಲ್ಲಿ ಉಸಿರಾಡುವ ಗಾಳಿಗೆ ಟ್ಯಾಕ್ಸ್ ಹಾಕಬಹುದು ಎಂದು ರಾಜ್ಯ ಸರ್ಕಾರದ ವಿರುದ್ಧ ಪರಿಷತ್ ಸದಸ್ಯ ಸಿ.ಟಿ.ರವಿ ಕಿಡಿಕಾರಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ಕಸ ಸಂಗ್ರಹಣೆಗೂ ಸೆಸ್ ವಿಧಿಸಲಾಗುತ್ತಿದೆ.

Advertisement

ಬ್ರ‍್ಯಾಂಡ್ ಬೆಂಗಳೂರು ಅಂತಾರೆ. ಆದರೆ ಎಲ್ಲಿ ನೋಡಿದರೂ ಕಸದ ರಾಶಿ. ಜನರು ಶಾಪ ಹಾಕುತ್ತಿದ್ದಾರೆ. ಹಿಮಾಲಯದಲ್ಲಿ ಶೌಚಾಲಯಕ್ಕೂ ಟ್ಯಾಕ್ಸ್ ಹಾಕಿದ್ದರು. ಹಾಗೇ ರಾಜ್ಯದಲ್ಲಿ ಉಸಿರಾಡುವ ಗಾಳಿಗೆ ಟ್ಯಾಕ್ಸ್ ಹಾಕಬಹುದು ಎಂದು ಲೇವಡಿ ಮಾಡಿದ್ದಾರೆ.

ಕೋರ್ಟ್ ಕೇಸ್ ನಿಮಿತ್ಯ ದೆಹಲಿಗೆ ಬಂದಿದ್ದೆ. ಹಾಗೆಯೇ ಬಿಜೆಪಿ ಕಚೇರಿಗೆ ಭೇಟಿ ಮಾಡಿ ಬಂದೆ. ಯತ್ನಾಳ್ ವಿಚಾರಕ್ಕೆ ಸಂಬAಧಿಸಿ ಏನೂ ಮಾತನಾಡಲ್ಲ. ಎಲ್ಲವನ್ನು ಕಾಲಕ್ಕೆ ಬಿಡುತ್ತೇನೆ. ಈಗ ಏನ್ ಮಾಡಿದ್ರೂ ತಪ್ಪಾಗುತ್ತೆ.

ಯತ್ನಾಳ್ ಹೊಸ ಪಕ್ಷ ಈಗಲೇ ಏನು ಹೇಳಲು ಸಾಧ್ಯವಿಲ್ಲ. ಸಮಯ ಎಲ್ಲವನ್ನು ನಿರ್ಧಾರ ಮಾಡಲಿದೆ. ಬಿಜೆಪಿ ಕಾಂಗ್ರೆಸ್ ಯಾರಿಗೆ ಎಫೆಕ್ಟ್ ಆಗುತ್ತೆ ಗೊತ್ತಿಲ್ಲ. ಹಿಂದೆಯೂ ಬಹಳ ಜನರು ಪಕ್ಷ ಸ್ಥಾಪಿಸಿದವರು ಯಶಸ್ವಿಯಾಗಿಲ್ಲ, ಡ್ಯಾಮೇಜ್ ಮಾಡಬಹುದು ಎಂದು ತಿಳಿಸಿದ್ದಾರೆ.

 


Spread the love

LEAVE A REPLY

Please enter your comment!
Please enter your name here