ಗದಗದಲ್ಲಿ ನಿಲ್ಲದ ಮೈಕ್ರೋ ಫೈನಾನ್ಸ್ ಕಿರುಕುಳ: ವ್ಯಕ್ತಿಯೋರ್ವ ನೇಣಿಗೆ ಶರಣು!

0
Spread the love

ಗದಗ:- ನಗರದಲ್ಲಿ ಮತ್ತೊಬ್ಬ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮೈಕ್ರೋ ಫೈನಾನ್ಸ್ ಕಿರುಕುಳ ಆರೋಪ ಕೇಳಿಬಂದಿದೆ. ಗದಗ ಬೆಟಗೇರಿಯ ನರಸಾಪೂರದ ಆಶ್ರಯ ಕಾಲೋನಿಯಲ್ಲಿ 40 ವರ್ಷದ ಉಮೇಶ ಕಾಟವಾ ಆತ್ಮಹತ್ಯೆಗೆ ಶರಣಾದ ವ್ಯಕ್ತಿ.

Advertisement

ಮೃತ ವ್ಯಕ್ತಿಯು, BSS ಫೈನಾನ್ಸ್, ಕ್ರೆಡಿಟ್ ಆಕ್ಸೆಸ್ ಗ್ರಾಮೀಣ ಲಿಮಿಟೆಡ್ ಸೇರಿದಂತೆ ಇತರೆ ಮೈಕ್ರೋ ಫೈನಾನ್ಸ್ ನಲ್ಲಿ ಸುಮಾರು ಒಂದೂವರೆ ಲಕ್ಷ ಸಾಲ ಮಾಡಿದ್ದರು. ಸಾಲ ಮರುಪಾವತಿ ಮಾಡುವಂತೆ ಸಿಬ್ಬಂದಿಗಳು ಕಿರುಕುಳ ನೀಡಲು ಆರಂಭಿಸಿದ್ದಾರೆ. ರಾತ್ರಿ ಒಂಭತ್ತು ಗಂಟೆಯಾದ್ರೂ ಮನೆ ಕಡೆ ಬಂದು ಸಾಲ ಮರುಪಾವತಿಗೆ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಟಾರ್ಚರ್ ಕೊಡುತ್ತಿದ್ದರು. ಈ ಕಿರುಕುಳಕ್ಕೆ ಬೇಸತ್ತು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸ್ಥಳಕ್ಕೆ ಬೆಟಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಬೆಟಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.


Spread the love

LEAVE A REPLY

Please enter your comment!
Please enter your name here