ವಿಜಯಸಾಕ್ಷಿ ಸುದ್ದಿ, ಗದಗ: ಇಲ್ಲಿನ ಶಿವಾನಂದ ನಗರದ ಬಸವ ಸಮುದಾಯ ಭವನದಲ್ಲಿ ಎಪ್ರಿಲ್ 6ರ ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಬಸವದಳದ 1640ನೇ ಶರಣ ಸಂಗಮದಲ್ಲಿ ಎಡೆಯೂರು ತೋಂಟದ ಸಿದ್ಧಲಿಂಗ ಶಿವಯೋಗಿಗಳ ಕುರಿತು ಉಪನ್ಯಾಸ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಅಧ್ಯಕ್ಷತೆಯನ್ನು ಶರಣ ವಿ.ಕೆ. ಕರೇಗೌಡ್ರ ವಹಿಸುವರು. ಶರಣೆ ಮಂಜುಳಾ ಹಾಸಿಲಕರ ಉಪನ್ಯಾಸ ನೀಡುವರು. ಬಸವದಳದ ಸದಸ್ಯರು, ಶರಣ ಸಾಹಿತ್ಯಾಭಿಮಾನಿಗಳು ಹಾಗೂ ಆಸಕ್ತರು ಭಾಗವಹಿಸಬೇಕೆಂದು ಸಂಘಟಿಕರ ಪರವಾಗಿ ಪ್ರಕಾಶ ಅಸುಂಡಿಯವರು ವಿನಂತಿಸಿದ್ದಾರೆ.



