Crime News: ಲೋನ್ ಕಟ್ಟಲು ಹೇಳಿದ ಬ್ಯಾಂಕ್ ಸಿಬ್ಬಂದಿಗೆ ಕಲ್ಲೇಟು -ಆಸ್ಪತ್ರೆಗೆ ದಾಖಲು!

0
Spread the love

ಬೆಂಗಳೂರು:- ಕಳೆದ ಎರಡು ತಿಂಗಳಿಂದ ಲೋನ್ ಕಟ್ಟದ ಹಿನ್ನೆಲೆ ಹಣ ವಸೂಲಿಗೆ ಹೋದ ಬ್ಯಾಂಕ್ ಸಿಬ್ಬಂದಿಗೆ ಕಲ್ಲೇಟಿನಿಂದ ಹಲ್ಲೆ ಮಾಡಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದಲ್ಲಿ ಜರುಗಿದೆ.

Advertisement

ಚಂದನ್ ಕಲ್ಲೇಟು ತಿಂದ ಬ್ಯಾಂಕ್ ಸಿಬ್ಬಂದಿ. ರಮೇಶ್ ಎಂಬಾತ ಕಳೆದ ಎರಡು ತಿಂಗಳಿನಿಂದ ಇಎಂಐ ಕಟ್ಟಿರಲಿಲ್ಲ. ಫೋನ್ ಮಾಡಿದರೆ ರಿಸೀವ್ ಮಾಡುತ್ತಿರಲಿಲ್ಲ. ಕೊನೆಗೆ ಫೋನ್ ರಿಸಿವ್ ಮಾಡಿದ ರಮೇಶ್ ನಾಗರಭಾವಿಯ ಬಿಡಿಎ ಕಾಂಪ್ಲೆಕ್ಸ್ ಬಳಿ ಬರುವಂತೆ ಸಿಬ್ಬಂದಿಗೆ ಹೇಳಿದ್ದ. ಬ್ಯಾಂಕ್ ಸಿಬ್ಬಂದಿ ಸ್ಥಳಕ್ಕೆ ಹೋದ ವೇಳೆ ಲೋನ್ ವಿಚಾರವಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ರಮೇಶ್ ಏಕಾಏಕಿ ಅಲ್ಲೇ ಇದ್ದ ಕಲ್ಲಿನಿಂದ ಬ್ಯಾಂಕ್ ಸಿಬ್ಬಂದಿ ಚಂದನ್ ಮೇಲೆ ಕಲ್ಲೂ ತೂರಿ ಎಸ್ಕೇಪ್ ಆಗಿದ್ದಾನೆ.

ಘಟನೆಯಿಂದ ಬ್ಯಾಂಕ್ ಸಿಬ್ಬಂದಿ ಚಂದನ್ ತಲೆಗೆ ಗಂಭೀರವಾದ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆ ಸಂಬಂಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here