ನೀನು ನಂಬಿದ ದೈವ ಕೈಬಿಡಲ್ಲ: ರಿಷಬ್‌ ಶೆಟ್ಟಿಗೆ ಅಭಯ ನೀಡಿದ ದೈವ

0
Spread the love

ನಟ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿದ್ದ ಕಾಂತಾರ ಸಿನಿಮಾ ಸೂಪರ್‌ ಹಿಟ್‌ ಆಗಿದೆ. ಈ ಸಿನಿಮಾದ ಬಳಿಕ ರಿಷಬ್‌ ಶೆಟ್ಟಿ ಪರಭಾಷೆಗಳಿಂದ ಸಖತ್‌ ಆಫರ್‌ ಬರ್ತಿದೆ. ಸದ್ಯ ರಿಷಬ್‌ ಶೆಟ್ಟಿ ಕಾಂತಾರ ೨ ಸಿನಿಮಾದ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ರಿಷಬ್‌ ಮಂಗಳೂರಿನಲ್ಲಿ ನಡೆದ ಪಂಜುರ್ಲಿ ನೇಮಕ್ಕೆ ಬಂದು ಬೇಡಿಕೊಂಡಿದ್ದಾರೆ .

Advertisement

ನಿನ್ನೆ ರಾತ್ರಿ 11 ಗಂಟೆಯಿಂದ ನಸುಕಿನ 4 ಗಂಟೆವರೆಗೂ ದೈವದ ಉತ್ಸವದಲ್ಲಿ ಡಿವೈನ್ ಸ್ಟಾರ್ ರಿಷಬ್‌ ಶೆಟ್ಟಿ ಭಾಗಿಯಾಗಿದ್ದಾರೆ. ವಾರಾಹಿ ಪಂಜುರ್ಲಿ ದೈವದ ವಾರ್ಷಿಕ ಉತ್ಸವದಲ್ಲಿ ರಿಷಬ್ ಭಾಗಿಯಾಗಿದ್ದಾರೆ.

ಈ ಉತ್ಸವದ ಕೊನೆಯಲ್ಲಿ ವಾರಾಹಿ ಪಂಜುರ್ಲಿ ದೈವದಲ್ಲಿ ಕಷ್ಟ ಹೇಳಿಕೊಂಡ ರಿಷಬ್ ಶೆಟ್ಟಿ ತಮ್ಮ ನೋವನ್ನು ತಿಳಿಸಿದ್ದಾರೆ. ಈ ವೇಳೆ ದೈವವು ಜಗತ್ತಿನೆಲ್ಲೆಡೆ ನಿನಗೆ ದುಶ್ಮನ್ ಗಳಿದ್ದಾರೆ, ನಿನ್ನ ಸಂಸಾರ ಹಾಳು ಮಾಡಲು ಯತ್ನಿಸುತ್ತಿದ್ದಾರೆ. ನಿನ್ನ ಕಾರ್ಯ ಫಲ ನೀಡದಂತೆ ಹಾಳು ಮಾಡಲು ಭಾರೀ ಸಂಚು ನಡೆದಿದೆ. ಈಗ ಗಂಡಾಂತರ ಬಂದಿದೆಯೆಂದು ಬಂದಿದ್ದೀಯಾ? ನೀನು ನಂಬಿದ ದೈವ ಕೈಬಿಡಲ್ಲ ಎಂದು ದೈವ ಆಶ್ವಾಸನೆ ನೀಡಿದೆ.

ಯಾರೋ ನಿನಗೆ ಕೇಡು ಬಗೆದಿದ್ದಾರೆ, ಅವರು ಯಾರೆಂದು ನಾನು ಹೇಳಲ್ಲ, ನಿನಗೆ ಕೇಡು ಆಗದಂತೆ ನೋಡಿಕೊಳ್ಳುವೆ, ನನಗೆ ಸೇವೆ ನೀಡುವ ಹರಕೆ ಹೇಳಿಕೋ 5 ತಿಂಗಳಲ್ಲಿ ಒಳ್ಳೆದು ಮಾಡುತ್ತೇನೆ ಎಂದು ಅಭಯ ನೀಡಿದೆ. ಈ ಮೂಲಕ ಕೈಮುಗಿದು ಬೇಡಿಕೊಂಡ ರಿಷಬ್ ದಂಪತಿಗೆ ವಾರಾಹಿ ಪಂಜುರ್ಲಿ ದೈವದ ಅಭಯ ಸಿಕ್ಕಿದೆ.


Spread the love

LEAVE A REPLY

Please enter your comment!
Please enter your name here