ಬೆಂಗಳೂರು:- ನಾವು ಬಿಡದಿಯಲ್ಲಿ ಎರಡನೇ ವಿಮಾನ ನಿಲ್ದಾಣ ಮಾಡುತ್ತಿಲ್ಲ ಎಂದು ಸಚಿವ ಎಂಬಿ ಪಾಟೀಲ್ ಸ್ಪಷ್ಟನೆ ಕೊಟ್ಟಿದ್ದಾರೆ.
ಎರಡನೇ ವಿಮಾನ ನಿಲ್ದಾಣ ನಿರ್ಮಿಸಲು ಬಿಡದಿ ಸೂಕ್ತವಲ್ಲ ಎಂದು ಈ ಹಿಂದೆ ಟಿಕ್ನಿಕಲ್ ಟೀಂ ವರದಿ ವಿಚಾರವಾಗಿ ಮಾತನಾಡಿದ ಅವರು, ನಾವು ಬಿಡದಿಯಲ್ಲಿ ಎರಡನೇ ವಿಮಾನ ನಿಲ್ದಾಣ ಮಾಡುತ್ತಿಲ್ಲ. ಅಲ್ಲಿ ಡಿ.ಕೆ.ಶಿವಕುಮಾರ್ ಲೇ ಔಟ್ ಮಾಡ್ತಿದ್ದಾರೆ. ಗ್ರೇಟರ್ ಬಿಡದಿ ಸೈಟ್ ಮಾಡುತ್ತಿದ್ದಾರೆ ಎಂದರು.
ಕನಕಪುರದ ಹಾರೋಹಳ್ಳಿ ಬಳಿ ಒಂದು ಜಾಗ ನೋಡಲಾಗಿದೆ. ಕುಣಿಗಲ್ ರಸ್ತೆ ಬಳಿ ಒಂದು ಜಾಗ ನೋಡಿದ್ದೇವೆ. ವಿಧಾನಸೌಧಕ್ಕೆ 50 ಕಿ.ಮೀ ದೂರ ಇದೆ. ಇಲ್ಲಿಗೆ ಕೇಂದ್ರ ಅಧ್ಯಯನ ತಂಡದ ಭೇಟಿ ನೀಡಿ ಪರಿಶೀಲನೆ ಮಾಡುತ್ತಾರೆ. ವೀಕ್ಷಣೆ ಮಾಡಿ ದೆಹಲಿಗೆ ಹೋಗುತ್ತಾರೆ. ಜಾಗಗಳ ಬಗ್ಗೆ ರಿಪೋರ್ಟ್ ಕೊಡುತ್ತಾರೆ. ಆಮೇಲೆ ನಾವು ಸಮಗ್ರ ಯೋಜನಾ ವರದಿ ಮಾಡಬೇಕಾಗುತ್ತದೆ. ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ದೊಡ್ಡ ದೊಡ್ಡ ಕಂಪನಿಗಳು ಯಾವುದು ಎನ್ನುವುದನ್ನು ನೋಡಬೇಕಾಗುತ್ತದೆ. ಆಮೇಲೆ ಕ್ಯಾಬಿನೆಟ್ ನಲ್ಲಿ ಚರ್ಚಿಸಬೇಕು, ಕ್ಯಾಬಿನೆಟ್ ಒಪ್ಪಿಗೆ ಬಳಿಕ ಅಂತಿಮ ಆಗಲಿದೆ ಎಂದು ಸ್ಪಷ್ಟಪಡಿಸಿದರು.