ಮುಖ್ಯಮಂತ್ರಿ ಪದಕ ಪುರಸ್ಕೃತರಿಗೆ ಸನ್ಮಾನ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯ ಪೊಲೀಸ್ ಇಲಾಖೆಯ ವಿವಿಧ ವಿಭಾಗಗಳಲ್ಲಿ ಕಾರ್ಯದಕ್ಷತೆ, ಪ್ರಾಮಾಣಿಕತೆ ಮತ್ತು ವೃತ್ತಿ ನಿಷ್ಠೆಯನ್ನು ಮೆಚ್ಚಿ ಕೊಡಮಾಡುವ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳ ಪದಕ ಸ್ವೀಕರಿಸಿದ ಜಿಲ್ಲೆಯ ಪೊಲೀಸ್ ಅಧಕಾರಿ/ಸಿಬ್ಬಂದಿಗಳಾದ ಬಸವರಾಜ ಗುಡ್ಲಾಗನೂರು, ಆನಂದ್ ಸಿಂಗ್ ದೊಡ್ಡಮನಿ, ಸಿದ್ದರಡ್ಡಿ ಕಪ್ಪತ್ತನವರ, ಪ್ರವೀಣ್ ಕಲ್ಲೂರು ಇವರಿಗೆ ಗುರುವಾರ ಗದಗ ಶಹರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಹೆಚ್.ಶಿವರಾಮೇಗೌಡ್ರ ಬಣ) ಗದಗ ಜಿಲ್ಲಾ ಘಟಕದಿಂದ ಸನ್ಮಾನಿಸಲಾಯಿತು.

Advertisement

ಈ ಸಂದರ್ಭದಲ್ಲಿ ಗದಗ ನಗರದಲ್ಲಿ ಅಪರಾಧಗಳಿಗೆ ಕಡಿವಾಣ ಹಾಕಿದ ಗದಗ ಶಹರ ಸಿ.ಪಿ.ಐ ಡಿ.ಬಿ. ಪಾಟೀಲ್ ಶಹರ ಪಿ.ಎಸ್‌ಐ ರೇಣುಕಾ ಮುಂಡೆವಾಡಿ, ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಗಿರಿಜಾ ಬಿ.ಜಕ್ಲಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಗದಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ ಮುಳ್ಳಾಳ, ಉತ್ತರ ಕರ್ನಾಟಕ ರೈತ ಘಟಕದ ಅಧ್ಯಕ್ಷ ಬಸಯ್ಯ ಗುಡ್ಡಿಮಠ, ಜಿಲ್ಲಾ ಗೌರವಾಧ್ಯಕ್ಷ ಗುರುರಾಜ ಕಲಕೇರಿ, ಮಲ್ಲಿಕಾರ್ಜುನ ಕಿರೇಸೂರ, ಜಿಲ್ಲಾ ಸಂಚಾಲಕ ಪರಶುರಾಮ ಬನ್ನೂರ, ಜಿಲ್ಲಾ ಕಾರ್ಯಾಧ್ಯಕ್ಷ ಒಂಟಿ, ಗದಗ ತಾಲೂಕಾಧ್ಯಕ್ಷ ಸಂತೋಷ ಕುಂಬಾರ, ಲಕ್ಷ್ಮಣ ಪೂಜಾರ, ಜಿಲ್ಲಾ ಉಪಾಧ್ಯಕ್ಷ ವಿರೇಶ ಬೊಮ್ಮಸಾಗರ ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here