ಸಿದ್ದರಾಮಯ್ಯ ನಡವಳಿಕೆ ನೋಡಿದ್ರೆ ಅವರು ಮುಖ್ಯಮಂತ್ರಿ ಅಂತಾನೇ ಅನ್ನಿಸ್ತಾನೇ ಇಲ್ಲ: ಸಚಿವ ವಿ. ಸೋಮಣ್ಣ

0
Spread the love

ಹುಬ್ಬಳ್ಳಿ: ಸಿದ್ದರಾಮಯ್ಯ ನಡವಳಿಕೆ ನೋಡಿದರೆ ಅವರು ಮುಖ್ಯಮಂತ್ರಿ ಅಂತಾನೇ ಅನ್ನಿಸ್ತಾನೇ ಇಲ್ಲ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ಜಾತಿ ಗಣತಿ ವಿಚಾರವಾಗಿ ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಮೊದಲಿನಂತೆ ಇಲ್ಲ, ಅವರ ನಡವಳಿಕೆ ನೋಡಿದರೆ ಅವರು ಮುಖ್ಯಮಂತ್ರಿ ಅಂತಾನೇ ಅನ್ನಿಸ್ತಾನೇ ಇಲ್ಲ,

Advertisement

ರಾಜ್ಯದಲ್ಲಿ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ. ಇದು ನೋವಿನ ಸಂಗತಿ, ತಮ್ಮ ಕುರ್ಚಿಯನ್ನು ಉಳಿಸಿಕೊಳ್ಳಲು ಜನರ ಗಮನ ಬೇರೆಡೆ ಸೆಳೆಯಲು ಈ ಧಾಳವನ್ನು ಉರುಳಿಸಿದ್ದಾರೆ. ಇದರ ಮೂಲಕ ರಾಜ್ಯದ ಜನರ ಮೇಲೆ ಗಧಾ ಪ್ರಹಾರ ಮಾಡುತ್ತಿದ್ದಾರೆ. ಇದು ಖಂಡನೀಯ ಎಂದು ಹೇಳಿದ್ದಾರೆ.

ಇನ್ನೂ ಬಿಜೆಪಿಯ ಜನಾಕ್ರೋಶ ಯಾತ್ರೆ ವಿರುದ್ದವಾಗಿ ಕಾಂಗ್ರೆಸ್ ಪ್ರತಿಭಟನೆ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಕಾಂಗ್ರೆಸ್ ಸರ್ಕಾರದ ಅಂಗಡಿ ಬಂದ್ ಆಗಿದೆ. ಅವರಲ್ಲಿ ಹಣವಿಲ್ಲ, ಬಂದ್ ಆಗಿರುವ ಅಂಗಡಿ ಬಗ್ಗೆ ಏನೂ ಹೇಳುವುದು ಎಂದು ಲೇವಡಿ ಮಾಡಿದರು.


Spread the love

LEAVE A REPLY

Please enter your comment!
Please enter your name here