ಬೆಳಗಾವಿ:- ಕೀಟನಾಶಕ ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ್ದ ನವವಿವಾಹಿತೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಬೈಲಹೊಂಗಲ ತಾಲೂಕಿನ ಇಂಚಲ ಗ್ರಾಮದಲ್ಲಿ ಜರುಗಿದೆ.
Advertisement
ಮೃತ ಮಹಿಳೆಯನ್ನು 22 ವರ್ಷದ ಮಂಜುನಾಥ ಹೂಗಾರ ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಲಕ್ಷ್ಮಿ ಕೀಟನಾಶಕ ಮಾತ್ರೆಗಳನ್ನು ನುಂಗಿದ್ದಾಳೆ. ಇದರಿಂದ ಅಸ್ವಸ್ಥರಾಗಿದ್ದ ಅವರನ್ನು ಕುಟುಂಬಸ್ಥರು ಮೊದಲು ಬೈಲಹೊಂಗಲದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು. ಆದರೆ ಹೆಚ್ಚಿನ ಚಿಕಿತ್ಸೆ ಬೇಕಿದ್ದರಿಂದ ಲಕ್ಷ್ಮಿಯನ್ನು ಅಲ್ಲಿಂದ ಬೆಳಗಾವಿಯ ಬಿಮ್ಸ್ ಆಸ್ಪತ್ರೆ ದಾಖಲು ಮಾಡಲಾಗಿತ್ತು. ಆದರೆ ದುರಾದೃಷ್ಟವಶಾತ್ ಚಿಕಿತ್ಸೆ ಫಲಿಸದೇ ಇದೀಗ ಸಾವನ್ನಪ್ಪಿದ್ದಾರೆ.
ಸದ್ಯ ಈ ಸುದ್ದಿ ತಿಳಿಯುತ್ತಿದ್ದಂತೆ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.