ರಾಹುಲ್ ಗಾಂಧಿ ತೃಪ್ತಿ ಮಾಡಲು ಜಾತಿಗಣತಿ ವರದಿ ಬಿಡುಗಡೆ ಮಾಡಿದ್ದಾರೆ: ಛಲವಾದಿ ನಾರಾಯಣಸ್ವಾಮಿ

0
Spread the love

ಬೆಂಗಳೂರು: ರಾಹುಲ್ ಗಾಂಧಿ ತೃಪ್ತಿ ಮಾಡಲು ಜಾತಿಗಣತಿ ವರದಿ ಬಿಡುಗಡೆ ಮಾಡಿದ್ದಾರೆ ಎಂದು ವಿಧಾನ್ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಮುಂದಿನ ತಿಂಗಳಿಂದ ಕೇಂದ್ರ ಸರ್ಕಾರ ಜಾತಿಗಣತಿ ಪ್ರಾರಂಭ ಮಾಡುತ್ತಿದೆ.

Advertisement

ಹೀಗಿರುವಾಗ ನೀವು ಯಾಕೆ ಜಾತಿಗಣತಿ ಬಿಡುಗಡೆ ಮಾಡಿದ್ದೀರಿ? ಈ ವರದಿ 10 ವರ್ಷಗಳ ಹಿಂದಿನ ವರದಿನಾ? ಹೊಸದಾಗಿ ಮಾಡಿರೋದಾ? 10 ವರ್ಷಗಳಲ್ಲಿ ಯಾರು ಹುಟ್ಟಿಲ್ಲವಾ, ಸತ್ತಿಲ್ಲವಾ? ಸರ್ಕಾರ ಇದಕ್ಕೆ ಉತ್ತರ ಕೊಡಬೇಕು. ಈ ಕಾಂಗ್ರೆಸ್ ಸರ್ಕಾರ ಜಾತಿ ಹಿಂದೆ ಬಿದ್ದಿದೆ. ರಾಹುಲ್ ಗಾಂಧಿ ತೃಪ್ತಿ ಮಾಡಲು ಜಾತಿಗಣತಿ ವರದಿ ಬಿಡುಗಡೆ ಮಾಡಿದ್ದಾರೆ.

ಒಕ್ಕಲಿಗ, ಲಿಂಗಾಯತ ಮತ ಒಡೆದು ಮುಸ್ಲಿಮರನ್ನ ಒಲೈಕೆ ಮಾಡಲು ಹೋಗಿದ್ದಾರೆ. ನಮ್ಮ ಜನಾಂಗವನ್ನು ಕಡಿಮೆ ತೋರಿಸಿದ್ದಾರೆ. ನಮ್ಮ ನಮ್ಮ ಜನಾಂಗದ ನಡುವೆ ಹೋರಾಟ ಮಾಡುವ ಸ್ಥಿತಿಗೆ ಈ ಸರ್ಕಾರ ತಂದಿದೆ ಎಂದು ಕಿಡಿಕಾರಿದ್ದಾರೆ.


Spread the love

LEAVE A REPLY

Please enter your comment!
Please enter your name here