HomeGadag Newsಜಾತಿಗಣತಿ ವರದಿ ದೋಷಪೂರಿತವಾಗಿದ್ದು ಲಿಂಗಾಯತರಿಗೆ ಅನ್ಯಾಯವಾಗಿದೆ: ತೋಂಟದಾರ್ಯ ಶ್ರೀ

ಜಾತಿಗಣತಿ ವರದಿ ದೋಷಪೂರಿತವಾಗಿದ್ದು ಲಿಂಗಾಯತರಿಗೆ ಅನ್ಯಾಯವಾಗಿದೆ: ತೋಂಟದಾರ್ಯ ಶ್ರೀ

For Dai;y Updates Join Our whatsapp Group

Spread the love

ಗದಗ: ಜಾತಿಗಣತಿ ದೋಷಪೂರಿತ ವರದಿಯಾಗಿದೆ. ವರದಿಯಲ್ಲಿ ಲಿಂಗಾಯತರಿಗೆ ಅನ್ಯಾಯವಾಗಿದೆ ಎಂದು ಗದಗದ ತೋಂಟದಾರ್ಯ ಮಠದ ಪೀಠಾಧಿಪತಿ ಡಾ. ಸಿದ್ದರಾಮ ಶ್ರೀಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜಾತಿಗಣತಿ ದೋಷಪೂರಿತವಾಗಿದ್ದು ಸರ್ಕಾರ ಇನ್ನೊಮ್ಮೆ ಸಮೀಕ್ಷೆ ನಡೆಸಬೇಕು. ಸುಮಾರು ಏಳೆಂಟು ವರ್ಷಗಳ ಹಿಂದೆ ಜಾತಿಗಣತಿ ಸಿದ್ಧಪಡಿಸಿದ್ದು, ವರದಿ ಸಾರ್ವಜನಿಕರಲ್ಲಿ ಸಂಶಯ ಹುಟ್ಟುಹಾಕಿದೆ.. ಆ ಜಾತಿ ಜನಗಣತಿ ವರದಿ ಸಮರ್ಪಕವಾಗಿ ಇಲ್ಲ. ಆ ವರದಿಯನ್ನ ಸಿದ್ಧಪಡಿಸಿದ ವ್ಯಕ್ತಿಗಳು ಕರ್ನಾಟಕ ಪ್ರತಿಯೊಬ್ಬ ವ್ಯಕ್ತಿಯನ್ನು ಸಂಪರ್ಕಿಸಿಲ್ಲವೆಂಬ ಆರೋಪವಿದೆ ಎಂದು ಶ್ರೀಗಳು ಹೇಳಿದ್ದಾರೆ.

ಕರ್ನಾಟಕದಲ್ಲಿ ಲಿಂಗಾಯತರು ಬಹುಸಂಖ್ಯಾತರೆಂಬುದು ಎಲ್ಲರಿಗೂ ತಿಳಿದಿದೆ. ನಂತರ ಒಕ್ಕಲಿಗರು ಸೇರಿದಂತೆ ವಿವಿಧ ಜಾತಿಯವರು ಮುಂಚೂಣಿಯಲ್ಲಿದ್ದಾರೆ. ಆದರೆ, ಲಿಂಗಾಯತರ ಜನಸಂಖ್ಯೆ ಗಣನೀಯವಾಗಿ ಕಡಿಮೆ ಆಗಿದೆ. ಲಿಂಗಾಯತರು ಮೀಸಲಾತಿಗಾಗಿ ಉಪಜಾತಿಯ ಹೆಸರನ್ನು ಬರೆಸಿರುವ ಕಾರಣ ಇರಬಹುದು. ದೋಷಪೂರಿತ ವರದಿಯನ್ನ ಸರ್ಕಾರ ಒಪ್ಪಿಕೊಳ್ಳುವುದರಿಂದ ಅನೇಕರಿಗೆ ಅನ್ಯಾಯವಾಗಬಹುದು. ಶಿಕ್ಷಣ, ರಾಜಕಾರಣ, ಉದ್ಯೋಗ ಹಾಗೂ ವ್ಯವಸಾಯ ಸೇರಿದಂತೆ ಅನೇಕ ಜಾತಿ ಉಪಜಾತಿಗಳಿಗೆ ಅನ್ಯಾಯವಾಗಬಹುದು. ನೂರಾರು ಉಪಜಾತಿಗಳನ್ನು ವರದಿಯಲ್ಲಿ ಕೈ ಬಿಟ್ಟಿರೋದು ಅತ್ಯಂತ ಆಘಾತಕಾರಿಯಾಗಿದೆ ಎಂದು ಶ್ರೀಗಳು ಕಳವಳ ವ್ಯಕ್ತಪಡಿಸಿದರು.

ಸರ್ಕಾರ ಸ್ವೀಕಾರ ಮಾಡಿರುವ ವರದಿ ಸಮರ್ಪಕವಾಗಿಲ್ಲ. ಲಿಂಗಾಯತರು ಜನಸಂಖ್ಯೆ ಅಂದಾಜಿನ ಪ್ರಕಾರ ಒಂದೂವರೆ ಕೋಟಿ ಇದ್ದಾರೆ. ಆದರೆ, ಲಿಂಗಾಯತ ಸಂಖ್ಯೆ ವರದಿಯಲ್ಲಿ 72 ಲಕ್ಷಕ್ಕೆ ಇಳಿಸಿದ್ದು ಅತ್ಯಂತ ಆಘಾತಕಾರಿಯಾಗಿದೆ. ಬೇರೆ ಬೇರೆ ಜಾತಿಯವರು ಮುನ್ನೆಲೆಗೆ ಬಂದಿದ್ದಾರೆ. ಸರ್ಕಾರ ಇನ್ನೊಮ್ಮೆ ಪರಿಶೀಲನೆ ಮಾಡಿ ನೈಜ ವರದಿ ಬಿಡುಗಡೆ ಮಾಡಬೇಕು. ಸರ್ಕಾರ ಯಾರಿಗೂ ಅನ್ಯಾಯವಾಗದಂತಹ ವರದಿಯನ್ನ ಸಿದ್ಧಪಡಿಸಿ ಯೋಜನೆ ಪೂರ್ಣಗೊಳಿಸಬೇಕು ಎಂದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!