ದಲಿತ ಹೋರಾಟಗಾರ ಸತೀಶ ಹೂಲಿಯವರಿಗೆ ಸನ್ಮಾನ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ನಗರಸಭೆ ಗದಗ-ಬೆಟಗೇರಿ, ಗದಗ ಜಿಲ್ಲೆಯ ದಲಿತಪರ ಹಾಗೂ ವಿವಿಧ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ ಹಾಗೂ ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನರಾಂ ಅವರ ಜಯಂತ್ಯುತ್ಸವದ ನಿಮಿತ್ತ ನಗರದ ಅಂಬೇಡ್ಕರ ಭವನದಲ್ಲಿ ನಡೆದ ಸಮಾರಂಭದಲ್ಲಿ ದಲಿತ ಮುಖಂಡರಾದ ಸತೀಶ ಹೂಲಿಯವರನ್ನು ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲರು ಸನ್ಮಾನಿಸಿ, ಗೌರವಿಸಿದರು.

Advertisement

ಈ ಸಂದರ್ಭದಲ್ಲಿ ವಿ.ಪ ಸದಸ್ಯ ಎಸ್.ವಿ. ಸಂಕನೂರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ಪೌರಾಯುಕ್ತ ರಾಜಾರಾಮ ಎಸ್.ಪವಾರ, ಮಹೇಶ ಪೋತದಾರ, ಮುಖಂಡರಾದ ಎಸ್.ಎನ್. ಬಳ್ಳಾರಿ, ಕೃಷ್ಣಾ ಪರಾಪೂರ, ಬಸವರಾಜ ಕಡೇಮನಿ, ಡಿ.ಜಿ. ಜೋಗಣ್ಣನವರ, ಸತೀಶ ಪಾಸಿ, ಅಶೋಕ ಕುಡುತಿನಿ, ದುರಗೇಶ ವಿಭೂತಿ, ಮಾರ್ತಂಡಪ್ಪ ಹಾದಿಮನಿ, ಎಸ್.ಸಿ/ಎಸ್.ಟಿ ದೌರ್ಜನ್ಯ ನಿಯಂತ್ರಣ ಸಮಿತಿ ಸದಸ್ಯರಾದ ಶರೀಫ ಬಿಳೇಯಲಿ, ಸಂಗಮೇಶ ಹಾದಿಮನಿ, ವಿನಾಯಕ ಬಳ್ಳಾರಿ ಸೇರಿದಂತೆ ದಲಿತಪರ ಸಂಘಟನೆಯ ಮುಖಂಡರು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here