ಜೀವನದ ಪಯಣದ ಸುತ್ತ `ಕಾವೇರಿ ತೀರದಲ್ಲಿ…’

0
Spread the love

ಮನುಷ್ಯನ ಜೀವನ ಅನ್ನೋದು ಒಂದು ಸಮುದ್ರದ ತೀರದಂತೆ. ಅದು ಕೆಲವೊಮ್ಮೆ ಪ್ರಶಾಂತವಾಗಿ ಸಾಗುತ್ತಿದ್ದರೆ, ಮತ್ತೆ ಕೆಲವೊಮ್ಮೆ ಭೋರ್ಗರೆಯುವ ಅಲೆಗಳಿಂದ ಬದುಕನ್ನು ಎದುರಿಸಬೇಕಾಗುತ್ತದೆ. ಯಾವಾಗ ಪ್ರಶಾಂತವಾಗಿ ಸಾಗುತ್ತದೆ, ಯಾವಾಗ ತನ್ನ ದಿಕ್ಕನ್ನು ವಿರುದ್ಧವಾಗಿ ಬದಲಿಸಿಕೊಂಡುಬಿಡುತ್ತೆ ಅನ್ನೋದನ್ನು ಯಾರಿಂದಲೂ ಸಹ ಊಹಿಸಲು ಸಾಧ್ಯವಾಗುವುದಿಲ್ಲ ಎಂಬ ಎಳೆಯನ್ನಿಟ್ಟುಕೊಂಡು `ಕಾವೇರಿ ತೀರದಲ್ಲಿ ಮುಂಗಾರಿದೆ’ ಎಂಬ ಚಿತ್ರವನ್ನು ಆರ್.ಕೆ. ಗಾಂಧಿ ಅವರು ನಿರ್ದೇಶಿಸುತ್ತಿದ್ದಾರೆ.

Advertisement

ಈಗಾಗಲೇ ತೆಲುಗಿನ ರುದ್ರಾಕ್ಷ ಪುರಂ, ಪ್ರೇಮ ಭಿಕ್ಷ ಹಾಗು ಕನ್ನಡದಲ್ಲಿ ಬಿಡುಗಡೆಗೆ ಸಿದ್ದವಾಗಿರುವ `ಮುಗಿಲ ಮಲ್ಲಿಗೆ’ ಚಿತ್ರಗಳನ್ನು ನಿರ್ದೇಶಿಸಿರುವ ಆರ್.ಕೆ. ಗಾಂಧಿ `ಕಾವೇರಿ ತೀರದಲ್ಲಿ…’ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಆಕ್ಷನ್ ಕಟ್ ಹೇಳುತ್ತಿದ್ದಾರೆ.

ಬಾಗಲಕೋಟೆ ಜಿಲ್ಲೆಯ ತೇರದಾಳ ಮೂಲದ ಉದಯ್ ನಾಯಕನಾಗಿ ಹಾಗೂ ಕನ್ನಡದಲ್ಲಿ ಮಗಳೇ, ಅಸುರರು ಚಿತ್ರಗಳಲ್ಲಿ ನಟಿಸಿದ್ದ ಸುಪ್ರಿತಾ ರಾಜ್ ಈ ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಸ್ನೇಹಾಲಯಂ ಕ್ರಿಯೇಷನ್ಸ್ ಲಾಂಛನದಲ್ಲಿ ನವೀನ್ ಕುಮಾರ್ ಗೌಡ, ಗೋಪಾಲ್ ಸ್ವಾಮಿ ಹಾಗೂ ವಸಂತ ನಾಯಕ್ ಆವರುಗಳು ಈ ಚಿತ್ರಕ್ಕೆ ಬಂಡವಾಳವನ್ನು ಹೂಡುತ್ತಿದ್ದಾರೆ.

ಚಿತ್ರದ ಪ್ರಮುಖ ತಾರಾಗಣದಲ್ಲಿ ಉದಯ್, ಸುಪ್ರಿತಾ ರಾಜ್, ಮಮತ, ಹೊಸಪೇಟೆ ರಾಘವೇಂದ್ರ, ಆಂಜಿನಪ್ಪ, ಅನ್ನಪೂರ್ಣ, ಸಿದ್ದಯ್ಯ ಎಸ್.ಹೀರೇಮಠ್, ಶೋಭರಾಜ್, ಪುಷ್ಪಾಗೌಡ ಮುಂತಾದವರಿದ್ದು, ಉಳಿದ ತಾರಾಗಣದ ಆಯ್ಕೆ ನಡೆಯುತ್ತಿದೆ.

ಗಂಧರ್ವ ರಾಯ್ ರಾವುತರ ಸಾಹಿತ್ಯ ಸಂಗೀತ, ನಾಗೇಂದ್ರ ಕುಮಾರ್ ಎಂ ಅವರ ಛಾಯಾಗ್ರಹಣ, ಮೋಹನ್ ಕುಮಾರ್ ಪ್ರಸಾಧನ, ವಿನಯ್ ಜಿ.ಆಲೂರು ಸಂಕಲನ, ವಿ.ಎಂ.ಎಸ್. ಗೋಪಿ ಪತ್ರಿಕಾ ಸಂಪರ್ಕ, ಮಲ್ಲಿಕಾರ್ಜುನ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ. ಎಪ್ರಿಲ್ 25ರಿಂದ ಆರಂಭಿಸಿ ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಹೊಸಪೇಟೆ, ಬಾಗಲಕೋಟೆ ಹಾಗೂ ಬಿಜಾಪುರ ಜಿಲ್ಲೆಯ ಸುತ್ತಮುತ್ತ ಚಿತ್ರದ ಚಿತ್ರೀಕರಣ ನಡೆಸಲು ಚಿತ್ರ ತಂಡ ಯೋಜನೆ ಹಾಕಿಕೊಂಡಿದೆ.

– ವಿ.ಎಂ.ಎಸ್. ಗೋಪಿ.

ಬೆಂಗಳೂರು.


Spread the love

LEAVE A REPLY

Please enter your comment!
Please enter your name here