ಬೆಂಗಳೂರು: ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ರಾಮನಗರ ಜಿಲ್ಲೆಯ ಬಿಡದಿ ಬಳಿ ದುಷ್ಕರ್ಮಿ ಗುಂಡಿನ ದಾಳಿ ಮಾಡಿರುವಂತಹ ಘಟನೆ ನಡೆದಿದೆ. ರಿಕ್ಕಿ ರೈ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ದುಷ್ಕರ್ಮಿ ಗುಂಡು ಹಾರಿಸಿದ್ದು, ಮೂಗು ಮತ್ತು ಕೈಗೆ ಗಂಭೀರ ಗಾಯಗಳಾಗಿವೆ. ಸದ್ಯ ಬಿಡದಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇನ್ನೂ ಈ ವಿಚಾರವಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರಿಕ್ಕಿ ರೈ ಮೇಲೆ ಅಟ್ಯಾಕ್ ವಿಚಾರ ನನಗೆ ವಿಷಯ ಗೊತ್ತಾಗಿದೆ. ಈ ಕುರಿತಾಗಿ ಪೊಲೀಸರ ಜೊತೆ ನಾನು ಮಾಹಿತಿ ಕೇಳಿದ್ದೇನೆ. ರಾತ್ರಿ ಒಂದು ಗಂಟೆಗೆ ಆಗಿದೆ. ಹೆಚ್ಚಿನ ಮಾಹಿತಿ ಕೇಳಿದ್ದೇನೆ ಎಂದು ತಿಳಿಸಿದರು.
ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆದರೂ ಅವರು ಪ್ರಾಣಾಪಯಾದಿಂದ ಪಾರಾಗಿದ್ದಾರೆ. ಔಟ್ ಆಫ್ ಡೆಂಜರ್, ಅದಲ್ಲದೆ ಘಟನೆಯ ಬಗ್ಗೆ ತನಿಖೆ ನಡೆಯುತ್ತಿದೆ ಎಂದರು. ಈ ಘಟನೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯ ಪ್ರಶ್ನೆಗೆ ಉತ್ತರಿಸಿ, ಕಾನೂನು ಸುವ್ಯವಸ್ಥೆ ಸರಿಯಾಗಿದೆ. ಎಲ್ಲ ಪ್ಯಾರಾ ಮೀಟರ್ಸ್ ಹೇಳುತ್ತಿವೆ ಎಂದರು.