ಬಾಲಿವುಡ್ ನಟಿ ಊರ್ವಶಿ ರೌಟೆಲ್ಲಾ ಒಂದಲ್ಲಾ ಒಂದು ಕಾರಣಕ್ಕೆ ವಿವಾದಗಳ ಮೂಲಕವೇ ಸುದ್ದಿಯಾಗುತ್ತಿರುತ್ತಾರೆ. ಸಿನಿಮಾಗಳಿಗಿಂತ ಹೆಚ್ಚಾಗಿ ತಮ್ಮ ವಿವಾದಾತ್ಮಕ ಹೇಳಿಕೆಗಳ ಮೂಲಕ ಸುದ್ದಿಯಾಗೋ ಊರ್ವಶಿ ಇದೀಗ ಮತ್ತೊಮ್ಮ ಮತ್ತೊಮ್ಮೆ ವಿವಾದಕ್ಕೆ ಗುರಿಯಾಗಿದ್ದಾರೆ. ಊರ್ವಶಿ ರೌಟೆಲ್ಲಾ ತಮ್ಮನ್ನು ಹೊಗಳಿಕೊಳ್ಳುವ ಭರದಲ್ಲಿ ಆಡಿದ ಮಾತುಗಳು ದೇವಾಲಯದ ಆರಾಧಕರಿಗೆ ಘಾಸಿ ಉಂಟು ಮಾಡಿದೆ.
ನಟಿ ಊರ್ವಶಿ ರೌಟೆಲಾ ಇತ್ತೀಚೆಗೆ ಮಾಧ್ಯಮಗಳೊಟ್ಟಿಗೆ ಮಾತನಾಡಿ, ಅಭಿಮಾನಿಗಳು ತಮಗಾಗಿ ದೇವಾಲಯ ನಿರ್ಮಾಣ ಮಾಡಿದ್ದಾರೆ ಎಂದು ಹೇಳಿದ್ದರು. ಉತ್ತರಾಖಂಡ್ನಲ್ಲಿ ನನ್ನ ಹೆಸರಿನಲ್ಲಿ ದೇವಾಲಯ ನಿರ್ಮಾಣ ಮಾಡಿದ್ದಾರೆ. ನನ್ನ ಮೂರ್ತಿಯನ್ನು ದೇವರಾಗಿ ಇರಿಸಿ ಪ್ರತಿನಿತ್ಯ ಪೂಜೆ ಮಾಡುತ್ತಿದ್ದಾರೆ, ಪ್ರತಿದಿನ ಸಾವಿರಾರು ಮಂದಿ ಭಕ್ತಾದಿಗಳು ಅಲ್ಲಿಗೆ ಭೇಟಿ ನೀಡುತ್ತಾ, ನನ್ನ ಮೂರ್ತಿಗೆ ಮಾಲೆ ಹಾಕಿ ಪೂಜೆ ಮಾಡುತ್ತಾರೆ ಎಂದೆಲ್ಲ ಹೇಳಿಕೊಂಡಿದ್ದರು.
ಅಸಲಿಗೆ ಉತ್ತರಾಖಂಡ್ ನಲ್ಲಿ ಬದ್ರಿನಾಥ ಧಾಮದ ಬಳಿ ಊರ್ವಶಿ ದೇವಾಲಯ ಇದೆ ಆದರೆ ಅದು ಮಾತೆ ಊರ್ವಶಿಯ ದೇವಾಲಯ. ಆ ದೇವಾಲಯಕ್ಕೆ ಸಾವಿರಾರು ವರ್ಷಗಳ ಐತಿಹ್ಯ ಇದೆ. ದೇವರ ದೇವಾಲಯವನ್ನು ತನ್ನ ದೇವಾಲಯ ಎಂದು ಊರ್ವಶಿ ರೌಟೆಲಾ ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದಾರೆ. ಇದು ಊರ್ವಶಿ ದೇವಾಲಯದ ಆರಾಧಕರ ಆಕ್ರೋಶಕ್ಕೆ ಕಾರಣವಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಊರ್ವಶಿ ದೇವಾಲಯ ಅರ್ಚಕ ಭುವನ್ ಚಂದ್ರ ಉನಿಯಲ್ ‘ನಟಿ ಊರ್ವಶಿ ರೌಟೆಲಾಗೂ ಊರ್ವಶಿ ದೇವಾಲಯಕ್ಕೂ ಯಾವುದೇ ಸಂಬಂಧ ಇಲ್ಲ. ಈ ದೇವಾಲಯ ಮಾತೆಯ ಸತಿಯ ಅಂಶ. 108 ಶಕ್ತಿದೇವತೆಗಳ ದೇವಾಲಯಗಳಲ್ಲಿ ಇದೂ ಸಹ ಒಂದಾಗಿದೆ. ಸ್ಥಳೀಯ ಹಲವು ಹಳ್ಳಿ, ನಗರಗಳಲ್ಲಿ ಈ ದೇವಿಯ ಆರಾಧಾಕರು ಸಹಸ್ರಾರು ಸಂಖ್ಯೆಯಲ್ಲಿದ್ದಾರೆ ಎಂದಿದ್ದಾರೆ.ಜೊತೆಗೆ ಇದು ನಟಿ ಊರ್ವಶಿ ರೌಟೆಲಾ ದೇವಾಲಯ ಅಲ್ಲ. ಪವಿತ್ರಾ ದೇವಾಲಯದ ಬಗ್ಗೆ ಈ ರೀತಿಯ ಹೇಳಿಕೆಗಳನ್ನು ಸಹಿಸಲು ಸಾಧ್ಯವಿಲ್ಲ. ಇಂಥಹಾ ಹೇಳಿಕೆ ನೀಡುವವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದಿದ್ದಾರೆ.