ಜನಿವಾರ ವಿವಾದ ಪ್ರಕರಣ: ಸಿಇಟಿ ಪರೀಕ್ಷಾಧಿಕಾರಿ ಮೇಲೆ ದಾಖಲಾಯ್ತು FIR!

0
Spread the love

ಶಿವಮೊಗ್ಗ: ಕರ್ನಾಟಕದಲ್ಲಿ ಇತ್ತೀಚೆಗೆ CET ಪರೀಕ್ಷೆ ನಡೆದಿತ್ತು. ಆದರೆ ಈ ವೇಳೆ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿಯು ಜನಿವಾರ ತೆಗೆಯದಿದ್ದಕ್ಕೆ ಪರೀಕ್ಷೆ ಬರೆಯಲು ನಿರಾಕರಿಸಲಾಗಿತ್ತು.

Advertisement

ಹೀಗಾಗಿ ಇದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದ ದೊಡ್ಡಪೇಟೆ ಠಾಣೆಯಲ್ಲಿ ಪರೀಕ್ಷೆ ಅಧಿಕಾರಿ ವಿರುದ್ಧ FIR ದಾಖಲಾಗಿದೆ. ಏಪ್ರಿಲ್ 16 ರಂದು ನಡೆದಿದ್ದ ಸಿಇಟಿ ಪರೀಕ್ಷೆಯಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಕತ್ತರಿಸಿದ್ದಾರೆ.

ಆದರೆ ಪರೀಕ್ಷಾ ವಿಚಾರದಲ್ಲಿ ಜನಿವಾರ ಕತ್ತರಿಸಬೇಕೆಂಬ ನಿಯಮವಿಲ್ಲ. ಕಾಲೇಜಿನ ಭದ್ರತಾ ಸಿಬ್ಬಂದಿ ಜನಿವಾರ ಕತ್ತರಿಸಿ ಬ್ರಾಹ್ಮಣ ಸಮುದಾಯಕ್ಕೆ ಅಪಮಾನ ಮಾಡಿದ್ದಾರೆ ಲ್ಲಾ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ನಟರಾಜ್ ಭಾಗವತ್ ಪೊಲೀಸರಿಗೆ ದೂರು ನೀಡಿದ್ದಾರೆ.

ಜನಿವಾರ ತೆಗೆಸಿದ್ದರಿಂದ ಬ್ರಾಹ್ಮಣ ಸಮುದಾಯಕ್ಕೆ ಅಪಮಾನವಾಗಿದೆ. ಇದರಿಂದ ಸಿಇಟಿ ಪರೀಕ್ಷೆಯ ಭದ್ರತೆ ನೋಡಿಕೊಳ್ಳುತ್ತಿರುವ ಅಧಿಕಾರಿ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ಕಳೆದ ರಾತ್ರಿ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here