ಕಾರವಾರ:- ಚಾಕುವಿನಿಂದ ಇರಿದು ನಗರಸಭೆ ಮಾಜಿ ಸದಸ್ಯನ ಭೀಕರ ಹತ್ಯೆ ನಡೆದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಬಿಎಸ್ಎನ್ಎಲ್ ಕಚೇರಿ ಬಳಿ ಜರುಗಿದೆ. ವಾಯುವಿಹಾರಕ್ಕೆ ತೆರಳಿದ್ದ ವೇಳೆ ಈ ಕೃತ್ಯ ನಡೆದಿದೆ.
Advertisement
ಸತೀಶ್ ಕೋಳಂಕರ್ ಕೊಲೆಯಾದ ನಗರಸಭೆ ಮಾಜಿ ಸದಸ್ಯ. ಇವರು ಇಂದು ಬೆಳಗ್ಗೆ ವಾಯುವಿಹಾರಕ್ಕೆ ತೆರಳಿದ್ದ ವೇಳೆ ದುಷ್ಕರ್ಮಿಗಳು ಚಾಕುವಿನಿಂದ ಇರಿದು, ಪರಾರಿಯಾಗಿದ್ದಾರೆ. ತಕ್ಷಣವೇ ಸತೀಶ್ರನ್ನ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.