ಬೆಂಗಳೂರು :- ಮೂರು ತಿಂಗಳ ಹಿಂದಷ್ಟೇ ಮದುವೆ ಆಗಿದ್ದ ಮಂಗಳಮುಖಿಯನ್ಮು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ನಡೆದಿರುವ ಘಟನೆ ಕೆ.ಆರ್.ಪುರಂನ ಬಸವೇಶ್ವರನಗರದ ಗಾಯತ್ರಿ ಲೇಔಟ್ನಲ್ಲಿ ನಡೆದಿದೆ.
ತನುಶ್ರೀ(40) ಮೃತ ದುರ್ದೈವಿ. ಮೂರು ತಿಂಗಳ ಹಿಂದೆ ಜಗನ್ನಾಥ್ ಎಂಬುವರ ಜೊತೆ ತನುಶ್ರೀ ವಿವಾಹವಾಗಿತ್ತು. ಮೂರು ದಿನಗಳ ಹಿಂದೆಯೇ ತನುಶ್ರೀಯನ್ನು ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ.
ಕೊಲೆ ತನುಶ್ರೀಯ ಪತಿ ಜಗನ್ನಾಥ್ ಮತ್ತು ಮನೆಗೆಲಸದಾಕೆ ಪರಾರಿಯಾಗಿದ್ದಾರೆ. ತನುಶ್ರೀ ಅವರು ಸಂಗಮ ಎಂಬ ಹೆಸರಿನ ಎನ್ಜಿಒ ನಡೆಸುತ್ತಿದ್ದರು. ಘಟನಾ ಸ್ಥಳಕ್ಕೆ ಕೆ.ಆರ್.ಪುರಂ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.



