ಗ್ರಾಮೀಣ ಪ್ರದೇಶದ ಜನರಿಗೆ ನರೇಗಾ ಅಸರೆ

0
Spread the love

ವಿಜಯಸಾಕ್ಷಿ ಸುದ್ದಿ, ನರಗುಂದ: ತಾಲೂಕಿನ ಕೊಣ್ಣೂರ ಗ್ರಾ.ಪಂ ವ್ಯಾಪ್ತಿಯಲ್ಲಿ 2025-26ನೇ ಸಾಲಿನ ಸಾಮೂಹಿಕ ಬದು ನಿರ್ಮಾಣ ಕಾಮಗಾರಿ ಸ್ಥಳಕ್ಕೆ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಎಸ್.ಕೆ. ಇನಾಮದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Advertisement

ನಂತರ ಮಾತನಾಡಿದ ಅವರು, ನರೇಗಾ ಯೋಜನೆಯಡಿ ಉದ್ಯೋಗ ಖಾತರಿ ಕೂಲಿ ಮೊತ್ತ 2025ರ ಎಪ್ರಿಲ್ 1ರಿಂದ ಜಾರಿಯಾಗುವಂತೆ 349ರಿಂದ 370 ರೂಗೆ ಹೆಚ್ಚಳವಾಗಿದೆ. ಕೂಲಿಕಾರರು ಗ್ರಾ.ಪಂಗೆ ಕೆಲಸದ ಬೇಡಿಕೆ ಸಲ್ಲಿಸಿ, ಕೆಲಸ ಪಡೆಯಬೇಕು. ಉದ್ಯೋಗ ಖಾತರಿ ಯೋಜನೆಯಡಿ ವರ್ಷಕ್ಕೆ 100 ಮಾನವ ದಿನಗಳ ಕೆಲಸ ಮಾಡಲು ಅವಕಾಶವಿದ್ದು, ಎಲ್ಲರೂ ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಕೂಲಿಕಾರರಿಗೆ ಅಳತೆಗೆ ಅನುಸಾರವಾಗಿ ಕೂಲಿ ಪಾವತಿಯಾಗುತ್ತದೆ. ಅಳತೆಗೆ ತಕ್ಕಂತೆ ಕೆಲಸ ಮಾಡಬೇಕು. ಪ್ರತಿ ದಿನ ಎರಡು ಬಾರಿ ಎನ್.ಎಂಎಂಎಸ್ ಹಾಜರಾತಿ ತೆಗೆದುಕೊಳ್ಳಲಾಗುತ್ತದೆ. ಕೂಲಿಕಾರರು ಎರಡೂ ಹಾಜರಾತಿಯನ್ನು ಕಡ್ಡಾಯವಾಗಿ ಹಾಕಿಸಬೇಕು. ಒಂದು ವೇಳೆ ಬೆಳಗಿನ ಹಾಜರಾತಿ ಹಾಕಿಸಿ ಮಧ್ಯಾಹ್ನದ ಹಾಜರಾತಿ ಹಾಕಿಸಲಿಲ್ಲ ಎಂದಾದರೆ ನಿಮಗೆ ಆ ದಿನದ ಕೂಲಿ ಪಾವತಿಯಾಗುವುದಿಲ್ಲ ಎಂದು ತಿಳಿಸಿದರು.

ಕೆಲಸ ಪ್ರಾರಂಭವಾಗಿದೆ ಎಂದು ಎನ್.ಎಂ.ಆರ್.ನಲ್ಲಿ ಹೆಸರು ಇಲ್ಲದೆ ಯಾವ ಕೂಲಿಕಾರರು ಕೆಲಸಕ್ಕೆ ಬರುವಂತಿಲ್ಲ. ಒಂದು ವೇಳೆ ಬಂದರೂ ಅವರಿಗೆ ಕೂಲಿ ಹಣ ಪಾವತಿಯಾಗುವುದಿಲ್ಲ. ಹಾಗಾಗಿ ಕೂಲಿಕಾರರು ಓಒಖ ಹಾಕಿಸಿ ಕೆಲಸಕ್ಕೆ ಬರುವಂತೆ ಸೂಚಿಸಿದರು.

ಈ ವೇಳೆ ತಾಲೂಕಾ ತಾಂತ್ರಿಕ ಸಂಯೋಜಕ ಹನುಂತ ಡಂಬಳ, ತಾಂತ್ರಿಕ ಸಹಾಯಕ ಲಿಂಗರಾಜ ಮುದಿಗೌಡ್ರ, ಗ್ರಾ.ಪಂ ಸಿಬ್ಬಂದಿಗಳು, ಗ್ರಾಮ ಕಾಯಕ ಮಿತ್ರರು, ಕಾಯಕ ಬಂಧುಗಳು ಇದ್ದರು.

ಬೇಸಿಗೆಯಲ್ಲಿ ಕೆಲಸ ಇಲ್ಲದ ಕಾರಣ ಖಾಲಿ ಕುಳಿತಿರುವ ಗ್ರಾಮೀಣ ಪ್ರದೇಶ ಜನರಿಗೆ ನರೇಗಾ ಯೋಜನೆಯಡಿ 13 ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರತಿ ಗ್ರಾಮಗಳಲ್ಲಿ ಸಾಮೂಹಿಕ ಕಾಮಗಾರಿ ಪ್ರಾರಂಭಿಸಿ ಸ್ಥಳೀಯವಾಗಿ ಕೆಲಸ ನೀಡುವ ಮೂಲಕ ಜನರ ಆರ್ಥಿಕವಾಗಿ ಸಬಲರನ್ನಾಗಿ ಮಾಡಲಾಗುತ್ತಿದೆ.

– ಎಸ್.ಕೆ. ಇನಾಮದಾರ್.

ಕಾರ್ಯನಿರ್ವಾಹಕ ಅಧಿಕಾರಿ, ನರಗುಂದ.


Spread the love

LEAVE A REPLY

Please enter your comment!
Please enter your name here