ವಿಜಯಸಾಕ್ಷಿ ಸುದ್ದಿ, ಕೊಪ್ಪಳ
ವಿಡಿಯೋ ಕಾಲ್ ಮಾಡಿ ಕೊರೊನಾ ರೋಗಿಗಳಲ್ಲಿ ಧೈರ್ಯ ತುಂಬುವ ಕಾರ್ಯವನ್ನು ಗವಿಮಠದ ಶ್ರೀ ಮಾಡಿದ್ದಾರೆ.
ಶ್ರೀಗಳು ಇತ್ತೀಚೆಗಷ್ಟೇ ವೃದ್ಧಾಶ್ರಮದಲ್ಲಿ 100 ಬೆಡ್ ಗಳ ಸಾಮರ್ಥ್ಯದ ಕೋವಿಡ್ ಕೇರ್ ಸೆಂಟರ್ ತೆರೆದಿದ್ದರು. ಈ ಕೋವಿಡ್ ಕೇರ್ ಸೆಂಟರ್ ನಲ್ಲಿ ದಾಖಲಾದ ರೋಗಿಗಳಿಗೆ ವೀಡಿಯೋ ಕಾಲ್ ಮಾಡಿ ಧೈರ್ಯ ತುಂಬಿದ್ದಾರೆ.
ಆರೋಗ್ಯ ವಿಚಾರಿಸಿ, ಯಾವುದೇ ರೀತಿಯ ಭಯಪಡದಂತೆ ರೋಗಿಗಳಲ್ಲಿ ಧೈರ್ಯ ತುಂಬಿದ್ದಾರೆ. ವೀಡಿಯೋ ಕಾಲ್ ಮೂಲಕ ಧೈರ್ಯ ತುಂಬಿದ ಶ್ರೀಗಳಿಗೆ ರೋಗಿಗಳು ಸಂತಸದಿಂದ ಕೈ ಮುಗಿದಿದ್ದಾರೆ.
ಜಿಲ್ಲಾ ಆಸ್ಪತ್ರೆಯಲ್ಲಿ ಬೆಡ್ ಫುಲ್ ಆಗುತ್ತಿದ್ದಂತೆ ಗವಿಮಠದಿಂದ 100 ಬೆಡ್ ಆಸ್ಪತ್ರೆ ವ್ಯವಸ್ಥೆ ಮಾಡಲಾಗಿದೆ. ಗವಿ ಮಠದ ಸ್ವಾಮೀಜಿ ಕಾರ್ಯಕ್ಕೆ ಸಿಎಂ ಯಡಿಯೂರಪ್ಪ ಅವರು ಕೂಡ ಧನ್ಯವಾದ ಅರ್ಪಿಸಿದ್ದಾರೆ.
ಒಟ್ಟು 100 ಹಾಸಿಗೆಯಲ್ಲಿ 70 ಆಕ್ಸಿಜನ್ ಬೆಡ್, 20 ಸಾಮಾನ್ಯ ಬೆಡ್ ಮಾಡಲಾಗಿದೆ. ಬಾಕಿ 10 ಬೆಡ್ ನಲ್ಲಿ 6 ಎಚ್ ಎಫ್ ಎನ್ ಸಿ ಬೆಡ್ ಮತ್ತು 4 ವೆಂಟಿಲೇಟರ್ ಬೆಡ್ ಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸ್ವಾಮೀಜಿ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.