HomeGadag Newsಎ.26ರಂದು ಸೊರಟೂರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ

ಎ.26ರಂದು ಸೊರಟೂರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಮುಳಗುಂದ: ಸಮಿಪದ ಸೊರಟೂರ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಎಪ್ರಿಲ್ 26ರಂದು ಬೆಳಿಗ್ಗೆ 10 ಗಂಟೆಗೆ ಸಂಘದ ಮುಂಭಾಗದಲ್ಲಿರುವ ನಾರಾಯಣಶಾಸ್ತ್ರಿ ಪುರಾಣಿಕರವರ ಜಮೀನಿನಲ್ಲಿ ಜರುಗಲಿದೆ ಎಂದು ಸಂಘದ ಅಧ್ಯಕ್ಷ ಎಂ.ಎಫ್. ಕಲಗುಡಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಕಾರ್ಯಕ್ರಮದ ಪಾವನ ಸಾನ್ನಿಧ್ಯವನ್ನು ಸೊರಟೂರ ಜಗದ್ಗುರು ಅನ್ನದಾನೇಶ್ವರ ಶಾಖಾಮಠದ ಶಿವಯೋಗೀಶ್ವರ ಮಾಹಾಸ್ವಾಮಿಗಳು ವಹಿಸಿಕೊಳ್ಳುವರು. ಘನ ಉಪಸ್ಥಿತಿಯನ್ನು ಸಭಾಪತಿ ಬಸವರಾಜ ಹೊರಟ್ಟಿ ವಹಿಸಲಿದ್ದು, ಸಹಕಾರ ಧ್ವಜಾರೋಹಣವನ್ನು ಸಹಕಾರಿ ಸಚಿವ ಕೆ.ಎನ್. ರಾಜಣ್ಣ ನೆರವೇರಿಸುವರು. ಉದ್ಘಾಟನೆಯನ್ನು ಸಚಿವ ಡಾ. ಎಚ್.ಕೆ. ಪಾಟೀಲ ನೆರವೇರಿಸುವರು. ಸ್ಮರಣ ಸಂಚಿಕೆ ಬಿಡುಗಡೆಯನ್ನು ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದರಾದ ಬಸವರಾಜ ಬೊಮ್ಮಾಯಿ, ಅಧ್ಯಕ್ಷತೆಯನ್ನು ಸೊರಟೂರ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎಂ.ಎಫ್. ಕಲಗುಡಿ ವಹಿಸುವರು.

ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ರೋಣ ಶಾಸಕ ಜಿ.ಎಸ್. ಪಾಟೀಲ್, ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ, ಮಾಜಿ ಸಹಕಾರಿ ಸಚಿವ ಎಸ್.ಎಸ್. ಪಾಟೀಲ್, ಮಾಜಿ ಶಾಸಕ ಡಿ.ಆರ್. ಪಾಟೀಲ್, ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ, ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ, ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ, ನರಗುಂದ ಶಾಸಕ ಸಿ.ಸಿ. ಪಾಟೀಲ್, ಗ್ರಾ.ಪಂ ಅಧ್ಯಕ್ಷ ಚಂದ್ರಮ್ಮ ಓಂಕಾರಿ ಹಾಗೂ ಸೊರಟೂರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ಪಿ.ವಾಯ್. ಮಲ್ಲಾರಿ ಹಾಗೂ ಸರ್ವ ನಿರ್ದೇಶಕ ಮಂಡಳಿ ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸುವರು.

ನಾಗಾವಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಬಿ.ಆರ್. ದೇವರೆಡ್ಡಿ ಹಾಗೂ ಜಿಲ್ಲಾ ಪಂಚಾAಯಿತಿ ಸ್ವಚ್ಛ ಭಾರತ ಮಿಷನ್ ಸಮಾಲೋಚಕ ಎಚ್.ಎಫ್. ಕುಸಣ್ಣವರ ಇವರನ್ನು ಸನ್ಮಾನಿಸಲಾಗುವುದು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!