ಪೆಹಲ್ಗಾವ್ ದಾಳಿ: ಉಗ್ರರನ್ನು ಬೆಂಬಲಿಸಿ ಫೇಸ್ ​ಬುಕ್​ನಲ್ಲಿ ಪೋಸ್ಟ್​- FIR ದಾಖಲು!

0
Spread the love

ಮಂಗಳೂರು:- ಕಾಶ್ಮೀರದ ಪೆಹಲ್ಗಾವ್ ಮೇಲೆ ಕಳೆದ ಮಂಗಳವಾರ ನಡೆದ ಭೀಕರ ಉಗ್ರರ ದಾಳಿಯಿಂದ ಸುಮಾರು 28 ಮಂದಿ ಉಸಿರು ಚಲ್ಲಿದ್ದಾರೆ. ಅಲ್ಲದೇ ಈ ಘಟನೆಯನ್ನು ಇಡೀ ವಿಶ್ವವೇ ಖಂಡಿಸಿದ್ದು, ಭಾರತಕ್ಕೆ ಬೆಂಬಲಿಸಿವೆ.

Advertisement

ಈ ನಡುವೆಯೇ ಜಮ್ಮು-ಕಾಶ್ಮೀರದ ಪೆಹಲ್ಗಾವ್​ನಲ್ಲಿ ನಡೆದ ಉಗ್ರರ ಗುಂಡಿನ ದಾಳಿಯನ್ನು ಸಮರ್ಥಿಸಿಕೊಂಡು ಫೇಸ್ ಬುಕ್ ನಲ್ಲಿ ಪೋಸ್ಟ್​ ಮಾಡಲಾಗಿದೆ. ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಇದೀಗ ಫೇಸ್ ಬುಕ್ ಪೇಜ್ ವಿರುದ್ಧ ಮಂಗಳೂರಿನ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಳ್ಳಾಲದ ಸತೀಶ್ ಕುಮಾರ್ ಎಂಬವರು‌ ನೀಡಿದ ದೂರಿನ ಆಧಾರದ ಮೇಲೆ ಬಿಎನ್​ಎಸ್​ ಸೆಕ್ಷನ್ 192 ಮತ್ತು 353(1)(,b) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಫೇಸ್​ಬುಕ್ ಪೇಜ್​ನ ಡಿಪಿ‌ಯಲ್ಲಿರುವ ವ್ಯಕ್ತಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ನಿಚ್ಚು ಮಂಗಳೂರು ಎಂಬ‌ ಫೇಸ್​ಬುಕ್​ ಪೇಜ್​ನಲ್ಲಿ, “2023ರಲ್ಲಿ ಮಹಾರಾಷ್ಟ್ರದ ಪಾಲ್ಗರ್​ನಲ್ಲಿ ಮೂವರು ಮುಸ್ಲಿಮರನ್ನು‌ ಕೊಲ್ಲಲಾಗಿತ್ತು. ಆರೋಪಿ ಚೇತನ್ ಸಿಂಗ್​ಗೆ ಸಾರ್ವಜನಿಕವಾಗಿ ನೇಣಿಗೆ ಹಾಕಲಿಲ್ಲ. ಪಾಲ್ಗರ್ ಘಟನೆ ಕಾರಣಕ್ಕೆ ಕಾಶ್ಮೀರದಲ್ಲಿ ಧರ್ಮ ಕೇಳಿ ಉಗ್ರರು ಹತ್ಯೆ ಮಾಡಿದ್ದಾರೆ” ಎಂದು ಪೋಸ್ಟ್​ ಹಾಕಲಾಗಿದೆ. ಈ ಪೋಸ್ಟ್​ಗೆ ಸಾಮಾಜಿಕ‌ ಜಾಲತಾಣದಲ್ಲಿ ನೆಟ್ಟಿಗರು ಭಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಪೇಸ್ ​ಬುಕ್​ ಪೇಜ್​ನ ಡಿಪಿಯಲ್ಲಿರುವ ಯುವಕ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ‌ಯಾಗಿದ್ದು, ಪೊಲೀಸರು ಆತನಿಗಾಗಿ ತಲಾಶ್ ನಡೆಸುತ್ತಿದ್ದಾರೆ.


Spread the love

LEAVE A REPLY

Please enter your comment!
Please enter your name here