ಬೆಂಗಳೂರು: ಪಕ್ಷ ಯಾವುದೇ ಇರಲಿ ಓರ್ವ ಮನುಷ್ಯನಿಗೆ ಕಿರುಕುಳ ಕೊಡುವುದಕ್ಕೂ ಒಂದು ಮಿತಿಯಿರಬೇಕು ಎಂದು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಬೇಸರ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸತತ 20 ಗಂಟೆಗಳಿಗೂ ಅಧಿಕ ಕಾಲ ನಡೆದ ಪರಿಶೀಲನೆಯ ಕುರಿತು ಮಾತನಾಡಿದ ಅವರು,
Advertisement
ಇ.ಡಿಯವರು ಬರೋದು ಒಂದಕ್ಕೆ, ಪರಿಶೀಲನೆ ಮಾಡುವುದು ಇನ್ನೊಂದು. ನನ್ನ ವಿರುದ್ಧದ ಷಡ್ಯಂತ್ರ ಇಂದು, ನಿನ್ನೆಯದ್ದಲ್ಲ. ನಾನೋರ್ವ ಶಾಸಕನಾಗಿ ನನ್ನ ಕ್ಷೇತ್ರಕ್ಕೆ ಹೋಗಲು ಸಾಧ್ಯವಾಗುತ್ತಿಲ್ಲ, ಜನರನ್ನು ಭೇಟಿಯಾಗಲು ಆಗುತ್ತಿಲ್ಲ.
ನನಗೆ ಕಿರುಕುಳ ನೀಡುವುದು ಮಾತ್ರ ನಿಂತಿಲ್ಲ. ಪಕ್ಷ ಯಾವುದೇ ಇರಲಿ ಓರ್ವ ಮನುಷ್ಯನಿಗೆ ಕಿರುಕುಳ ಕೊಡುವುದಕ್ಕೂ ಒಂದು ಮಿತಿಯಿರಬೇಕು. ಅಧಿಕಾರವಿದೆ ಎಂದು ಈ ರೀತಿ ಬಳಸಿಕೊಳ್ಳುತ್ತಿರುವುದು ನಿಜವಾಗಿಯೂ ನೋವಿನ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.