ಇಸ್ಲಾಮಾಬಾದ್: ಜಮ್ಮುಕಾಶ್ಮೀರದಲ್ಲಿ ನಡೆದ ಭೀಕರ ಉಗ್ರರ ದಾಳಿಯಲ್ಲಿ ಸುಮಾರು 28 ಮಂದಿ ಭಾರತೀಯರು ಬಲಿ ಆಗಿದ್ದಾರೆ. ಈ ಘಟನೆ ಬೆನ್ನಲ್ಲೇ ಕೇಂದ್ರ ಸರ್ಕಾರವು ಪಾಕಿಸ್ತಾನದ ಮೇಲೆ ಹಲವು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಅದರಲ್ಲಿ ಸಿಂಧು ನದಿ ನೀರು ಸ್ಥಗಿತವೂ ಸೇರಿದೆ.
ಈ ಬಗ್ಗೆ ಪಾಕಿಸ್ತಾನ ಪೀಪಲ್ಸ್ ಪಾರ್ಟಿ ಅಧ್ಯಕ್ಷ ಬಿಲಾವಲ್ ಭುಟ್ಟೋ ಮಾತನಾಡಿ, ಸಿಂಧೂ ನಮ್ಮದು. ನದಿ ನೀರು ಪಾಕಿಸ್ತಾನಕ್ಕೆ ಹರಿಯಬೇಕು. ಇಲ್ಲವಾದಲ್ಲಿ ಭಾರತೀಯರ ರಕ್ತ ಹರಿಯುತ್ತದೆ ಎಂದು ಹೇಳಿಕೆ ಕೊಟ್ಟಿದ್ದಾರೆ.
ಪಹಲ್ಗಾಮ್ನಲ್ಲಿ ಇತ್ತೀಚೆಗೆ ನಡೆದ ಮಾರಕ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಸಿಂಧೂ ನದಿ ನೀರು ಒಪ್ಪಂದವನ್ನು ಸ್ಥಗಿತಗೊಳಿಸುವ ನಿರ್ಧಾರವನ್ನು ಭಾರತ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಭಾರತದ ವಿರುದ್ಧ ಭುಟ್ಟೋ ಮಾತನಾಡಿದ್ದಾರೆ.
ಪಹಲ್ಗಾಮ್ ದಾಳಿಗೆ ಪಾಕಿಸ್ತಾನವನ್ನು ಬಲಿಪಶು ಮಾಡಲಾಗುತ್ತಿದೆ. ಆ ಮೂಲಕ ಭಾರತ ತನ್ನ ಆಂತರಿಕ ಭದ್ರತಾ ಲೋಪಗಳಿಂದ ಗಮನವನ್ನು ಬೇರೆಡೆ ಸೆಳೆಯುತ್ತಿದೆ ಎಂದು ಆರೋಪಿಸಿದ್ದಾರೆ.