ಸಿಂಧೂ ನದಿ ನೀರು ಬೇರೆ ಕಡೆ ಹರಿಸಿದ್ರೆ ಸೇನೆ ಬಳಸಿ ಉತ್ತರ ಕೊಡ್ತೀವಿ: ಮತ್ತೆ ಭಾರತವನ್ನು ಕೆಣಕಿದ ಪಾಕ್ ಪ್ರಧಾನಿ!

0
Spread the love

ಇಸ್ಲಾಮಾಬಾದ್:- ಪಹಲ್ಗಾಮ್ ದಾಳಿ ಬಳಿಕ ಭಾರತ ಹಾಗೂ ಪಾಕ್ ನಡುವಿನ ಸಂಬಂಧದ ಕೊಂಡಿ ಕಳಚಿದೆ. ದಾಳಿ ಬೆನ್ನಲ್ಲೇ ಪಾಕ್ ವಿರುದ್ಧ ಕೆರಳಿರುವ ಭಾರತ ಹಲವು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.

Advertisement

ಹೌದು, ಪಹಲ್ಗಾಮ್ ದಾಳಿ ಬೆನ್ನಲ್ಲೇ ಭಾರತ ದೇಶವು ಸಿಂಧೂ ನದಿ ನೀರು ಹಂಚಿಕೆಯ ಒಪ್ಪಂದವನ್ನು ಅಮಾನತು ಮಾಡಿದ್ದು, ಇದು ಪಾಕಿಸ್ತಾನಕ್ಕೆ ಮರ್ಮಾಘಾತವನ್ನು ತಂದಿದೆ. ಈ ಬಗ್ಗೆ ಮೊದಲ‌ ಬಾರಿಗೆ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅವರು ಪ್ರತಿಕ್ರಿಯೆ ನೀಡಿದ್ದು, ಭಾರತಕ್ಕೆ ಎಚ್ಚರಿಕೆಯ ಸಂದೇಶ ನೀಡಿದ್ದಾರೆ.

ಸಿಂಧೂ ನದಿಯ ನೀರು ಪಾಕಿಸ್ತಾನಕ್ಕೆ ಜೀವನಾಡಿ ಇದ್ದಂತೆ. ಸಿಂಧೂ ನದಿಯ ನೀರನ್ನು ಭಾರತ ಬೇರೆ ಕಡೆ ತಿರುಗಿಸಿದರೆ ನಾವು ಸೇನೆಯನ್ನು ಬಳಸಿ ಉತ್ತರ ನೀಡುತ್ತೇವೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

ಪಹಲ್ಗಾಮ್‌ನಲ್ಲಿ ಭಾರತೀಯರು, ನೇಪಾಳದ ನಾಗರಿಕರು ಸೇರಿ 26 ಮಂದಿ ಸಾವನ್ನಪ್ಪಿದ್ದಾರೆ. ನಾವು ಈ ಘಟನೆಯನ್ನು ತಟಸ್ಥವಾಗಿ ತನಿಖೆ ನಡೆಸಲು ರೆಡಿ ಇದ್ದೇವೆ. ಪಾಕಿಸ್ತಾನ ನಂಬಲಾರ್ಹ ತನಿಖೆಯ ಬಗ್ಗೆ ಮಾತುಕತೆ ನಡೆಸಲು ಸಿದ್ಧವಿದೆ ಎಂದಿದ್ದಾರೆ.


Spread the love

LEAVE A REPLY

Please enter your comment!
Please enter your name here