HomeBengaluru Cityಜ. ರೇಣುಕರ ಸಿದ್ಧಾಂತ ನೆಮ್ಮದಿಗೆ ಮೂಲ

ಜ. ರೇಣುಕರ ಸಿದ್ಧಾಂತ ನೆಮ್ಮದಿಗೆ ಮೂಲ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಬೆಂಗಳೂರು: ಪರಿಪೂರ್ಣತೆಯೆಡೆಗೆ ಸಾಗುವುದೇ ಮನುಷ್ಯನ ಪರಮ ಗುರಿ. ಅರಿವು-ಆದರ್ಶಗಳನ್ನು ಬೋಧಿಸಿ ಉದ್ಧರಿಸಿದವರು ಶ್ರೀ ಜಗದ್ಗುರು ರೇಣುಕಾಚಾರ್ಯರು. ಅವರು ಬೋಧಿಸಿದ ತತ್ವ ಸಿದ್ಧಾಂತಗಳು ಶಾಂತಿ, ನೆಮ್ಮದಿಯ ಬದುಕಿಗೆ ಮೂಲ ಸೆಲೆಯಾಗಿವೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.

ಅವರು ಶನಿವಾರ ನಗರದ ಶ್ರೀ ಜಗದ್ಗುರು ರೇಣುಕಾಚಾರ್ಯ ವಿದ್ಯಾ ಸಂಸ್ಥೆಯ ಭವ್ಯ ಸಭಾಂಗಣದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮನೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.

ದೇಶ ಮತ್ತು ಧರ್ಮ ಮನುಷ್ಯನ ಎರಡು ಕಣ್ಣು. ಭಾರತೀಯ ಉತ್ಕೃಷ್ಟ ಸಂಸ್ಕೃತಿಯನ್ನು ಆಚಾರ್ಯರು, ಋಷಿ-ಮುನಿಗಳು, ಸಂತ-ಮಹಾಂತರು ಉಳಿಸಿ ಬೆಳೆಸಿಕೊಂಡು ಬಂದಿದ್ದಾರೆ. ಧರ್ಮ ಮತ್ತು ಆಚರಣೆ ಬೇರೆ ಬೇರೆಯಾದರೂ ತಲುಪುವ ಗುರಿ ಎಲ್ಲರದೂ ಒಂದೇ ಆಗಿದೆ. ಶ್ರೀ ಜಗದ್ಗುರು ರೇಣುಕಾಚಾರ್ಯರು ಬೋಧಿಸಿದ ಶಿವಾದ್ವೈತ ತತ್ವ ಸಿದ್ಧಾಂತಗಳ ಅರಿವು ಮಾನವ ಜೀವನದ ಸುಖ-ಶಾಂತಿಯ ಬದುಕಿಗೆ ಗಂಗೋತ್ರಿಯಾಗಿದೆ. ಅಹಿಂಸಾದಿ ಧ್ಯಾನ ಪರ್ಯಂತರವಾದ ದಶ ಧರ್ಮ ಸೂತ್ರಗಳನ್ನು ಬೋಧಿಸಿ ಸಕಲರನ್ನು ಉದ್ಧರಿಸಿದ ಶ್ರೇಯಸ್ಸು ಅವರದು. ಕಾಯಕ ಮತ್ತು ದಾಸೋಹದ ಮೂಲಕ ಸಂತೃಪ್ತಿ ಬದುಕಿಗೆ ಸ್ಫೂರ್ತಿಯ ಸೆಲೆಯಾದವರು. ಇಂಥ ಮಹಿಮಾನ್ವಿತರ ಜಯಂತಿ ಆಚರಿಸುತ್ತಿರುವುದು ತಮಗೆ ಅತ್ಯಂತ ಸಂತೋಷ ತಂದಿದೆ ಎಂದರು.

ಮಹಲಿಂಗಪುರದ ವಿನಾಯಕ ಚಿಕ್ಕೋಡಿ ಇವರು ರೇಖಾಚಿತ್ರದಲ್ಲಿ ಬಿಡಿಸಿದ ಶ್ರೀ ಜಗದ್ಗುರು ರೇಣುಕಾಚಾರ್ಯರ ನವಲೀಲೆಯ ಭಾವಚಿತ್ರಗಳನ್ನು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಇವರು ಅನಾವರಣಗೊಳಿಸಿ ಹರುಷ ವ್ಯಕ್ತಪಡಿಸಿದರು.

ನಿವೃತ್ತ ಪ್ರಾಧ್ಯಾಪಕರಾದ ಪ್ರೊ. ಎಚ್.ವಿ. ಪಂಚಾಕ್ಷರಯ್ಯ ಅವರು ಶ್ರೀ ಜಗದ್ಗುರು ರೇಣುಕಾಚಾರ್ಯರ ಧಾರ್ಮಿಕ ಮತ್ತು ಸಾಮಾಜಿಕ ಚಿಂತನಗಳನ್ನು ಕುರಿತು ಉಪನ್ಯಾಸವನ್ನಿತ್ತರು. ಸಮಾರಂಭದ ನೇತೃತ್ವ ವಹಿಸಿದ ಎಡೆಯೂರು ಕ್ಷೇತ್ರದ ರೇಣುಕ ಶಿವಾಚಾರ್ಯರು, ಸಮ್ಮುಖ ವಹಿಸಿದ ಸಿದ್ಧರಬೆಟ್ಟದ ವೀರಭದ್ರ ಶಿವಾಚಾರ್ಯರು ಉಪದೇಶಾಮೃತವನ್ನಿತ್ತರು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಲಾಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಯು.ಎಂ. ಬಸವರಾಜ ವಹಿಸಿದ್ದರು. ಡಾ. ರೂಪ ಎನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಪ್ರಾರ್ಥನಾ ಗೀತೆ ಜರುಗಿತು. ಡಾ.ಪ್ರೇಮ ಸಿದ್ಧರಾಜು ಸ್ವಾಗತಿಸಿದರು. ಡಾ. ಮಮತಾ ಸಾಲಿಮಠ ಮತ್ತು ಲಾವಣ್ಯ ಜಿ.ಕೆ ನಿರೂಪಿಸಿದರು.

ಸಮಾರಂಭ ಉದ್ಘಾಟಿಸಿದ ಕರ್ನಾಟಕ ರಾಜ್ಯ ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷ, ರೋಣ ಶಾಸಕರಾದ ಜಿ.ಎಸ್. ಪಾಟೀಲ ಮಾತನಾಡಿ, ಶ್ರೀ ಜಗದ್ಗುರು ರೇಣುಕಾಚಾರ್ಯರು ಶಿವಾವತಾರಿಗಳಾಗಿ ಅವತರಿಸಿ ಭೂ ಮಂಡಲದಲ್ಲಿ ವೀರಶೈವ ಸಿದ್ಧಾಂತವನ್ನು ಪ್ರತಿಷ್ಠಾಪನೆಗೈದ ಕೀರ್ತಿವಂತರು. ಅವರು ಈ ನಾಡಿನ ಸಂಸ್ಕೃತಿಗೆ ಮತ್ತು ಪರಂಪರೆಗೆ ಕೊಟ್ಟ ಕೊಡುಗೆ ಅಮೂಲ್ಯ ಎಂದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!