ಹಿಂದೂ, ಮುಸ್ಲಿಂ ವಿಭಜನೆ ನಿಲ್ಲಿಸುವಂತೆ ನಟಿ ರಾಖಿ ಸಾವಂತ್‌ ಮನವಿ

0
Spread the love

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಹಲವರು ಖಂಡಿಸಿದ್ದಾರೆ. ಕನ್ನಡ ಸೇರಿದಂತೆ ಪರಭಾಷೆಯ ಕಲಾವಿದರು ಕೂಡ ಕೂಡ ಭಯೋತ್ಪಾದಕ ದಾಳಿಯ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಇದೀಗ ಬಾಲಿವುಡ್‌ ಚಿತ್ರರಂಗದ ವಿವಾದಾತ್ಮಕ ನಟಿ ರಾಖಿ ಸಾವಂತ್ ಹಿಂದೂ ಮತ್ತು ಮುಸ್ಲಿಂ ವಿಭಜನೆಯನ್ನು ನಿಲ್ಲಿಸುವಂತೆ ಮನವಿ ಮಾಡಿದ್ದಾರೆ. ಜೊತೆಗೆ ಮುಂದಿನ ರಜೆಯಲ್ಲಿ ಕಾಶ್ಮೀರಕ್ಕೆ ಭೇಟಿ ನೀಡೋದಾಗಿ ನಟಿ ಹೇಳಿದ್ದಾರೆ.

Advertisement

ಬುರ್ಖಾ ಧರಿಸಿ ಉಗ್ರರ ದಾಳಿ ಕುರಿತು ಮಾತನಾಡಿರುವ ನಟಿ, ನಾವೆಲ್ಲರೂ ಒಂದೇ. ನಮ್ಮ ಹಿಂದೂಸ್ಥಾನದಿಂದ ಮುಸ್ಲಿಮರನ್ನು ಯಾರೂ ಓಡಿಸಲು ಸಾಧ್ಯವಿಲ್ಲ. ಭಾರತವು ಹಿಂದೂಗಳಿಗೆ ಸೇರಿದಷ್ಟೇ ಮುಸ್ಲಿಮರಿಗೂ ಸೇರಿದೆ. ಹಿಂದೂ ಮತ್ತು ಮುಸ್ಲಿಮರನ್ನು ವಿಭಜಿಸಬೇಡಿ. ಸಣ್ಣ ಮಕ್ಕಳಂತೆ ವರ್ತಿಸಬೇಡಿ, ಪ್ರಬುದ್ಧರಾಗಿರಿ. ದೇವರ ಮೇಲೆ ಕರುಣೆ ತೋರಿ. ದೇವರು ಎಷ್ಟು ನೋವನ್ನು ಅನುಭವಿಸುತ್ತಿರಬಹುದು ಎಂದು ಊಹಿಸಿ. ಅವನು ನಮ್ಮೆಲ್ಲರನ್ನೂ ಸೃಷ್ಟಿಸಿದನು, ನಾವೆಲ್ಲರೂ ಅವನ ಮಕ್ಕಳು. ಆದರೆ ನಾವು ಪರಸ್ಪರ ಜಗಳವಾಡುತ್ತಿದ್ದೇವೆ. ಒಬ್ಬರನ್ನೊಬ್ಬರು ಕೊಲ್ಲುತ್ತಿದ್ದೇವೆ ಇದರಿಂದ ದೇವರಿಗೂ ಬೇಜಾರ್ ಆಗಿದೆ ಎಂದಿದ್ದಾರೆ.

ನಾನು ನನ್ನ ಮುಂದಿನ ರಜೆಯನ್ನು ಕಾಶ್ಮೀರದಲ್ಲಿ ಕಳೆಯುತ್ತೇನೆ. ಕಾಶ್ಮೀರಕ್ಕೆ ಹೋಗುವುದು ನಮ್ಮ ಹಕ್ಕು. ಕಾಶ್ಮೀರ ನಮ್ಮದು ಮತ್ತು ಕಾಶ್ಮೀರದ ಜನರು ನಮ್ಮ ಸಹೋದರ ಸಹೋದರಿಯರು. ನಾವು ಭಾರತದ ಹೊರಗೆ ಹೋಗುವುದಿಲ್ಲ. ನಾನು ಕಾಶ್ಮೀರಕ್ಕೆ ಹೋಗುತ್ತೇನೆ, ನೀವು ನನ್ನನ್ನು ಬೆಂಬಲಿಸುತ್ತೀರಾ? ಅಲ್ವಾ ಎಂದು ಅಭಿಮಾನಿಗಳಿಗೆ ನಟಿ ಪ್ರಶ್ನಿಸಿದ್ದಾರೆ. ಈ ಕಾರ್ಯಕ್ಕೆ ಬಾಲಿವುಡ್ ಕೂಡ ಬೆಂಬಲಿಸುತ್ತದೆ ಎಂದು ರಾಖಿ ಹೇಳಿದ್ದಾರೆ.


Spread the love

LEAVE A REPLY

Please enter your comment!
Please enter your name here