HomeBellaryನಾಳೆಯಿಂದ ಹಳ್ಳಿಗಳು ಆಗಲಿವೆ ಸಂಪೂರ್ಣ ಲಾಕ್!

ನಾಳೆಯಿಂದ ಹಳ್ಳಿಗಳು ಆಗಲಿವೆ ಸಂಪೂರ್ಣ ಲಾಕ್!

Spread the love

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ಇಲ್ಲಿಯವರೆಗೂ ನಗರ ಪ್ರದೇಶದಲ್ಲಿ ತನ್ನ ಅಟ್ಟಹಾಸ ಮುಂದುವರೆಸಿದ್ದ ಮಹಾಮಾರಿ ಸದ್ಯ ಗ್ರಾಮೀಣ ಭಾಗದಲ್ಲಿ ಸದ್ದು ಮಾಡುತ್ತಿದೆ. ಹೀಗಾಗಿ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ಹಳ್ಳಿಗಳನ್ನು ಸಂಪೂರ್ಣವಾಗಿ ಲಾಕ್ ಮಾಡಲು ಮುಂದಾಗಿವೆ.

ಇಂದು ರಾಜ್ಯದ ಹಲವು ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಲಾಕ್ ಡೌನ್ ಕುರಿತು ನಿರ್ಧಾರ ಕೈಗೊಳ್ಳುವ ಅಧಿಕಾರವನ್ನು ಸ್ಥಳೀಯ ಆಡಳಿತಕ್ಕೆ ನೀಡಿದ್ದಾರೆ. ಹೀಗಾಗಿ ಹಳ್ಳಿಗಳಲ್ಲಿ ಕೊರೊನಾ ಕಟ್ಟಿ ಹಾಕುವ ಪ್ರಯತ್ನ ಜಿಲ್ಲಾಡಳಿತದಿಂದ ನಡೆಯುತ್ತಿದೆ.

ಈಗಾಗಲೇ ಹಾಸನ ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಅವರು ಜಿಲ್ಲೆಯಲ್ಲಿ 4 ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಘೋಷಿಸಿದ್ದಾರೆ. ಸೋಮವಾರ, ಬುಧವಾರ, ಶುಕ್ರವಾರ ಮಾತ್ರ ಜಿಲ್ಲೆಯಲ್ಲಿ ಅಗತ್ಯವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ.

ಚಿಕ್ಕಬಳ್ಳಾಪುರದಲ್ಲಿ ಮೇ. 20 ರಿಂದ 23ರ ವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಲಾಗಿದೆ. ಹಾಲಿನ ಬೂತ್‌ ಗಳಿಗೆ ಮಾತ್ರ ಬೆಳಿಗ್ಗೆ 6ರಿಂದ 10ರ ವರೆಗೆ ಅವಕಾಶ ನೀಡಲಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಕೂಡ ಸಂಪೂರ್ಣ ಲಾಕ್ ಡೌನ್ ಘೋಷಿಸಲಾಗಿದೆ. ದೀನಸಿ ಅಂಗಡಿಗಳಿಗೆ ಇದ್ದ ಅನುಮತಿ ಕೂಡ ರದ್ದು ಮಾಡಲಾಗಿದೆ. ಮೇ. 24 ರ ಬೆಳಿಗ್ಗೆ 1ರ ವರೆಗೆ ಅಂಗಡಿ ತೆರೆಯುವಂತಿಲ್ಲ.

ಬಳ್ಳಾರಿಯಲ್ಲಿ ಕೂಡ 5 ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಘೋಷಿಸಲಾಗಿದೆ.
ಕಲಬುರಗಿಯಲ್ಲಿ 3 ದಿನಗಳ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಿದ್ದರೆ, ರಾಯಚೂರು ಜಿಲ್ಲೆಯಲ್ಲಿ 6 ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಘೋಷಿಸಲಾಗಿದೆ. ಮೇ. 22ರ ನಂರ ಒಂದು ದಿನ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗುವುದು ಎಂದು ಜನರಿಗೆ ಹೇಳಲಾಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!