ಅನ್ಯ ರಾಜ್ಯದ ವ್ಯಾಪಾರಿಗಳನ್ನು ತೆರವುಗೊಳಿಸಿ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಗದುಗಿನ ತೋಂಟದಾರ್ಯ ಮಠದ ಜಾತ್ರಾ ಮಹೋತ್ಸವದ ಹೆಸರಿನಲ್ಲಿ ನಗರ ಸಭೆಗೆ ಒಳಪಡುವ ಸಾರ್ವಜನಿಕ ರಸ್ತೆಯಲ್ಲಿ ತಾತ್ಕಾಲಿಕವಾಗಿ ಮಾರಾಟ ಮಳಿಗೆಯನ್ನು ನಿರ್ಮಾಣ ಮಾಡಿಕೊಂಡು ಅನ್ಯ ರಾಜ್ಯದ ವ್ಯಾಪಾರಿಗಳು ವ್ಯವಹಾರ ಮಾಡುತ್ತಿದ್ದು, ಸ್ಥಳೀಯರ ವ್ಯಾಪಾರ ಕಡಿಮೆಯಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ದಲಿತ ಮಿತ್ರ ಮೇಳದ ಅಧ್ಯಕ್ಷ ಕುಮಾರ ನಡಗೇರಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

Advertisement

ಕಳೆದ ಬಾರಿಯ ಜಾತ್ರಾ ಮಹೋತ್ಸವದಂತೆ ಈ ಬಾರಿಯೂ ಮತ್ತೆ ಹೋರಾಟಕ್ಕೆ ಅವಕಾಶ ನೀಡದೆ ಶೀಘ್ರವೇ ಈ ಅಂಗಡಿಗಳನ್ನು ತೆರವುಗೊಳಿಸಲು ಆಗ್ರಹಿಸಿದರು. ಈ ಸಂದರ್ಭದಲ್ಲಿ ದಲಿತ ಮಿತ್ರ ಮೇಳ ಉಪಾಧ್ಯಕ್ಷ ವೆಂಕಟೇಶ ದೊಡ್ಡಮನಿ, ಸದಸ್ಯರಾದ ರಮೇಶ ವಾಲ್ಮೀಕಿ, ಶಿವು ಬಂಗಾರಿ, ರಾಘವೇಂದ್ರ ಸೊರಟೂರ, ಸಾಗರ ಹುಯಿಲಗೋಳ ಉಪಸ್ಥಿತರಿದರು.


Spread the love

LEAVE A REPLY

Please enter your comment!
Please enter your name here